ಮನೆ ಶಿಕ್ಷಣ ಒಂದೇ ದಿನ 3 ಸ್ಪರ್ಧಾತ್ಮಕ ಪರೀಕ್ಷೆ: ಪ್ರತ್ಯೇಕ ದಿನಾಂಕ ನಿಗದಿ ಮಾಡುವಂತೆ ಸಿಎಂಗೆ ಸಚಿವ ಪ್ರಿಯಾಂಕ್...

ಒಂದೇ ದಿನ 3 ಸ್ಪರ್ಧಾತ್ಮಕ ಪರೀಕ್ಷೆ: ಪ್ರತ್ಯೇಕ ದಿನಾಂಕ ನಿಗದಿ ಮಾಡುವಂತೆ ಸಿಎಂಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ

0

ಬೆಂಗಳೂರು: ಒಂದೇ ದಿನ ಮೂರು ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಿಗದಿ ಹಿನ್ನೆಲೆ ಪರೀಕ್ಷೆಗಳನ್ನು ಬೇರೆ ಬೇರೆ ದಿನಾಂಕದಲ್ಲಿ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ನವೆಂಬರ್​ 5ರ ಭಾನುವಾರದಂದು 3 ಸ್ಪರ್ಧಾತ್ಮಕ ಪರೀಕ್ಷೆ ನಿಗದಿ ಮಾಡಲಾಗಿದೆ. KPSC ಲೆಕ್ಕ ಪರಿಶೋಧನಾ ಇಲಾಖೆಯ ಲೆಕ್ಕ ಸಹಾಯಕರ 242, ಸಹಕಾರ ಸಂಘಗಳ ನಿರೀಕ್ಷಕರ 47, ಖಾಲಿ ಇರುವ 454 ಸಿವಿಲ್ ಕಾನ್ಸ್ ​​ಟೇಬಲ್​ ಹುದ್ದೆಗೆ ಪರೀಕ್ಷೆ ನಿಗದಿ ಆಗಿದೆ.

ಕಳೆದ 5 ವರ್ಷದಿಂದ ಹಲವಾರು ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಆಗಿಲ್ಲ. ಉದ್ಯೋಗ ಸಿಗದೆ ಸಾವಿರಾರು ಅಭ್ಯರ್ಥಿಗಳು ಅನಾಯಕ್ಕೊಳಗಾಗಿದ್ದಾರೆ. ವರ್ಷಾನುಗಟ್ಟಲೆ ತಯಾರಿ ನಡೆಸಿದ ಅಭ್ಯರ್ಥಿಗಳಿಗೂ ಗೊಂದಲವಾಗಿದೆ.

ಒಂದೇ ದಿನ 3 ಹುದ್ದೆಗಳಿಗೆ ಪರೀಕ್ಷೆ ನಿಗದಿಗೊಳಿಸಿರುವುದರಿಂದ ಗೊಂದಲ ಉಂಟಾಗಿದ್ದು, ಬೇರೆ ದಿನಾಂಕದಲ್ಲಿ ಪರೀಕ್ಷೆ ನಡೆಸಲು ಅಭ್ಯರ್ಥಿಗಳು ಮನವಿ ಸಲ್ಲಿಸಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಗಳನ್ನು ಬೇರೆ ಬೇರೆ ದಿನಾಂಕಗಳಲ್ಲಿ ನಿಗದಿ ಮಾಡಲು ಸೂಚಿಸುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಲಾಗಿದೆ.