ಮುಂಬಯಿ: ಸಾಲಗಾರರನ್ನು ಬ್ಯಾಂಕ್ ಗಳ ಸಾಲ ವಸೂಲಿ ಕಿರುಕುಳದಿಂದ ಪಾರು ಮಾಡಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಮುಂದಾಗಿದೆ. ಸಾಲ ವಸೂಲಿ ಮಾಡಲು ಬೆಳಿಗ್ಗೆ 8 ಗಂಟೆಗೂ ಮುನ್ನ ಹಾಗೂ ರಾತ್ರಿ 7 ಗಂಟೆಯ ನಂತರ ಸಾಲಗಾರರಿಗೆ ದೂರವಾಣಿ ಕರೆ ಮಾಡುವುದನ್ನು ತಡೆಯಲು ಆರ್ ಬಿಐ ನಿರ್ಧರಿಸಿದ್ದು, ಈ ಸಂಬಂಧ ಕರಡು ನಿಯಮಗಳನ್ನು ಸಿದ್ಧಪಡಿಸಿದೆ.
ಬ್ಯಾಂಕ್ ಮತ್ತಯ ಬ್ಯಾಂಕೇತರ ಹಣಕಾಸು ಸಂಸ್ಥೆಗಳು (ಎನ್ ಬಿ ಎಫ್ ಸಿ) ಪ್ರಮುಖ ಬ್ಯಾಂಕಿಂಗ್ ಕೆಲಸಗಳನ್ನು ಹೊರ ಗುತ್ತಿಗೆ ನೀಡುವಂತಿಲ್ಲ. ನೀತಿ ರೂಪಿಸುವುದು, ಕೆವೈಸಿ ನಿಯಮಗಳ ಅನುಸರಣೆ, ಸಾಲ ಮಂಜೂರು ಸೇರಿದಂತೆ ಇನ್ನೂ ಕೆಲವು ಪ್ರಮುಖ ಕೆಲಸಗಳನ್ನು ಹೊರಗುತ್ತಿಗೆ ನೀಡದಂತೆ ನಿರ್ಬಂಧಿಸಲು ಆರ್ ಬಿಐ ಕ್ರಮ ಕೈಗೊಂಡಿದೆ. ಈ ಕುರಿತು ನವೆಂಬರ್ 28ರ ಒಳಗಾಗಿ ಸಲಹೆಗಳನ್ನು, ಪ್ರತಿಕ್ರಿಯೆಗಳನ್ನು ಆರ್ ಬಿಐ ಆಹ್ವಾನಿಸಿದೆ.
ಹಣಕಾಸು ಸಂಸ್ಥೆಗಳು ಮತ್ತು ಏಜೆಂಟರು ಸಾಲ ವಸೂಲಿ ಮಾಡುವ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯಲ್ಲಿಯೂ ಸಾಲಗಾರರ ಗೌರವಕ್ಕೆ ಚ್ಯುತಿ ಬರುವಂತೆ ನಡೆದುಕೊಳ್ಳಬಾರದು. ಸಾರ್ವಜನಿಕವಾಗಿ ಅವಹೇಳನ ಮಾಡಬಾರದು. ಸಾಲಗಾರರು/ಖಾತರಿದಾರರ ಕುಟುಂಬದ ಸದಸ್ಯರಿಗೂ ಅವಹೇಳನ ಮಾಡಬಾರದು ಎಂದು ಕರಡು ನೀತಿಯಲ್ಲಿ ಆರ್ ಬಿಐ ತಿಳಿಸಿದೆ.
ಸಾಲಗಾರರಿಗೆ ಮೊಬೈಲ್/ ಜಾಲತಾಣಗಳ ಮೂಲಕ ಅನುಚಿತವಾದ ಮೆಸೇಜ್ ಕಳುಹಿಸುವುದು, ಬೆದರಿಕೆ ಒಡ್ಡುವುದು, ಅನಾಮಧೇಯ ನಂಬರ್ ಗಳಿಂದ ಕರೆ ಮಾಡುವುದಕ್ಕೆ ನಿರ್ಬಂಧ ಬೀಳಲಿದೆ. ಸಾಲ ಪಡೆದವರಿಗೆ/ಖಾತರಿದಾರರಿಗೆ ಸತತವಾಗಿ ಕರೆ ಮಾಡುವಂತಿಲ್ಲ ಎಂದು ಹೇಳಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.