ಮನೆ ರಾಜ್ಯ ಕಬಿನಿ ನಾಲೆಯಲ್ಲಿ ಈಜಲು ಹೋಗಿದ್ದ ವೈದ್ಯ ವಿದ್ಯಾರ್ಥಿ ಸಾವು

ಕಬಿನಿ ನಾಲೆಯಲ್ಲಿ ಈಜಲು ಹೋಗಿದ್ದ ವೈದ್ಯ ವಿದ್ಯಾರ್ಥಿ ಸಾವು

0

ಅಂತರಸಂತೆ: ಕಬಿನಿ ಎಡದಂಡೆ ನಾಲೆಯಲ್ಲಿ ಈಜಲು ಹೋದ ವೈದ್ಯಕೀಯ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಎಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬೆಂಗಳೂರಿನ ಡಾ.ಬಿ.ಆರ್. ಅಂಬೇಡ್ಕರ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಕಿಶನ್ (21) ಮೃತಪಟ್ಟವರು.

ಇವರು ಬೆಂಗಳೂರಿನ ಬಾಣವರ ನಿವಾಸಿ ಶೈಲೇಂದ್ರ ಎಂಬವರ ಪುತ್ರ. ಸರಗೂರಿನ ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ತರಬೇತಿಗಾಗಿ ಐವರು ಸಹಪಾಠಿಗಳೊಂದಿಗೆ ಆಗಮಿಸಿದ್ದರು. ಭಾನುವಾರ ಸ್ನೇಹಿತರೊಂದಿಗೆ ಈಜಲೆಂದು ಕಬಿನಿ ನಾಲೆಗೆ ಬಂದಿದ್ದಾರೆ. ಈ ವೇಳೆ ಈಜಲು ಬಾರದ ಕಿಶನ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ನೀರಿನಲ್ಲಿ ಮುಳುಗುತ್ತಿದ್ದ ಕಿಶನ್ ನನ್ನು ಸ್ನೇಹಿತರು ರಕ್ಷಿಸಲು ಪ್ರಯತ್ನಿಸಿದಾದರೂ ಸಫಲವಾಗಲಿಲ್ಲ. ನಂತರ ಮೃತ ದೇಹವನ್ನು ಹೆಚ್.ಡಿ.ಕೋಟೆಯ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಸಂಬಂಧ ಅಂತರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.