ಮನೆ ರಾಜ್ಯ ಮಂಗಳೂರು: ನೇತ್ರಾವತಿ ಸೇತುವೆ ಬಳಿ ನೀರಿಗೆ ಹಾರಿ ಯುವಕ ಆತ್ಮಹತ್ಯೆ

ಮಂಗಳೂರು: ನೇತ್ರಾವತಿ ಸೇತುವೆ ಬಳಿ ನೀರಿಗೆ ಹಾರಿ ಯುವಕ ಆತ್ಮಹತ್ಯೆ

0

ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರಿನ ನೇತ್ರಾವತಿ ನದಿಯ ಸೇತುವೆ ಬಳಿ ಯುವಕನೊಬ್ಬ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಪ್ರಸನ್ನ (37) ಆತ್ಮಹತ್ಯೆ ಮಾಡಿಕೊಂಡವರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮಧ್ಯಾಹ್ನ ವೇಳೆ ತೊಕ್ಕೊಟ್ಟು ಕಡೆಯಿಂದ ಬಂದು ರಾಷ್ಟ್ರೀಯ ಹೆದ್ದಾರಿ‌ 66 ರ ಬಳಿ ಕಾರು ನಿಲ್ಲಿಸಿ ತಡೆಬೇಲಿಯ ಬದಿಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯನ್ನು ಪ್ರತ್ಯಕ್ಷ ಕಂಡವರು ತಕ್ಷಣ ರಕ್ಷಣೆಗೆ ಧಾವಿಸಿದರೂ ಅದಾಗಲೇ ನೀರುಪಾಲಾಗಿದ್ದರು.

ಘಟನಾ ಸ್ಥಳದಲ್ಲಿ ಜನರು ಜಮಾಯಿಸಿದ್ದರಿಂದ ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರಕ್ಕೆ ಅಡಚಣೆಯುಂಟಾಯಿತು.