ಮನೆ ರಾಜ್ಯ ಕಾವೇರಿ ಹೋರಾಟ ಕೈ ಬಿಡಲು ಶಾಸಕ ಗಣಿಗ ರವಿಕುಮಾರ್ ಮನವಿ

ಕಾವೇರಿ ಹೋರಾಟ ಕೈ ಬಿಡಲು ಶಾಸಕ ಗಣಿಗ ರವಿಕುಮಾರ್ ಮನವಿ

0

ಮಂಡ್ಯ:ಕಳೆದ 58 ದಿನಗಳಿಂದ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯು ಮಂಡ್ಯದಲ್ಲಿ ನಡೆಸುತ್ತಿರುವ ಹೋರಾಟವನ್ನು ಕೈ ಬಿಡುವಂತೆ ಶಾಸಕ ಪಿ.ರವಿಕುಮಾರ್ ಮನವಿ ಮಾಡಿದರು.


ನಗರದ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಹೋರಾಟದ ಸ್ಥಳದದಲ್ಲಿ ಬುಧವಾರ ನಡೆದ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು,ರೈತರ ಹಿತಕಾಯಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.ಕೆ.ಆರ್.ಎಸ್. ಅಣೆಕಟ್ಟೆಯಲ್ಲಿರುವ ನೀರನ್ನು ಉಳಿಸಿಕೊಳ್ಳುವ ಅವಶ್ಯಕತೆ ಇದೆ. ಎಲ್ಲಾ ಕೆರೆ ಕಟ್ಟೆ ತುಂಬಿಸಿ ರೈತರ ಬೆಳೆ ಉಳಿಸಿಕೊಳ್ಳುವ ಕೆಲಸ ಮಾಡುತ್ತೇವೆ.ಚಳವಳಿಯನ್ನು ಕೈ ಬಿಡಿ ಎಂದು ಕೋರಿದರು.
ಈ ವೇಳೆ ಕೆಲವು ಮುಖಂಡರು ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟವಾಗಿ ತಿಳಿಸಿಲ್ಲ,ಆದ್ದರಿಂದ ರೈತರ ಹಿತದೃಷ್ಠಿಯಿಂದ ಹೋರಾಟ ಮುಂದುವರೆಸಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದರು.