ಶಿವಮೊಗ್ಗ: ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳು ಇಂದು ತೀರ್ಥಹಳ್ಳಿ ತಾಲೂಕು ಹಣಗೆರೆ ಸಮೀಪದ ಬಸವನಗದ್ದೆ ಪ್ರಸನ್ನ ಎಂಬುವರ ಮನೆಯ ಮೇಲೆ ದಾಳಿ ನಡೆಸಿ ಜಿಂಕೆ ಹಾಗೂ ಕಾಡು ಕೋಣದ ಕೊಂಬುಗಳನ್ನು ವಶಕ್ಕೆ ಪಡೆದಿದ್ದಾರೆ.
ವನ್ಯಜೀವಿ ಕೊಂಬುಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟುಕೊಂಡಿರುವ ಆರೋಪದಡಿ ಪ್ರಸನ್ನ ಅವರನ್ನು ಅರಣ್ಯಾಧಿಕಾರಿಗಳು ಬಂಧಿಸಲು ಮುಂದಾದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಅರಣ್ಯಾಧಿಕಾರಿಗಳ ಕ್ರಮವನ್ನು ವಿರೋಧಿಸಿದರು.
ಅಲ್ಲದೆ ಪ್ರಸನ್ನ ಅವರಿಗೆ ವಯಸ್ಸಾಗಿದೆ, ಅವರನ್ನು ಬಂಧಿಸುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಈ ವೇಳೆ ಅರಣ್ಯ ಇಲಾಖೆಯ ಪಿಸಿಸಿಎಫ್ ಸೇರಿದಂತೆ ಮೇಲಾಧಿಕಾರಿಗಳ ಜೊತೆ ಆರಗ ಜ್ಞಾನೇಂದ್ರ ಮೊಬೈಲ್ ನಲ್ಲಿ ಮಾತನಾಡಿ, ಪ್ರಸನ್ನ ಅವರನ್ನು ಬಂಧಿಸದಂತೆ ಸೂಚಿಸಿದರು.
ಒಂದು ವೇಳೆ ಆತನನ್ನು ಬಂಧನ ಮಾಡಿದ್ರೆ, ಪ್ರತಿಭಟನೆ ನಡೆಸುವುದಾಗಿ ಹಾಗೂ ಅವರ ಜೊತೆ ತಮ್ಮನ್ನು ಕೂಡ ಬಂಧಿಸುವಂತೆ ಅಡ್ಡಿಪಡಿಸಿದರು.
ಬಂಧಿಸಲು ಬಂದಿದ್ದ ಎಸಿಎಫ್ ಅವರ ತಂಡ ಕಾಡುಕೋಣ ಹಾಗೂ ಜಿಂಕೆಯ ಕೊಂಬುಗಳನ್ನು ಮಾತ್ರ ವಶಕ್ಕೆ ಪಡೆದು ವಾಪಸ್ ಹೋದರು.
ಪ್ರಸನ್ನ ಅವರ ಮನೆಯಲ್ಲಿ ಸಿಕ್ಕ ಪ್ರಾಣಿಗಳ ಕೊಂಬುಗಳು ನೂರಾರು ವರ್ಷದಷ್ಟು ಹಿಂದಿನವು. ಈ ಕುಟುಂಬ ಬೇಟೆಯಾಡುವುದಿಲ್ಲ. ಅವರು ಮನೆ ಬಳಿ ಬಂದ ಮಂಗಳನ್ನು ಬೆದರಿಸುತ್ತಾರೆ ಬಿಟ್ಟರೆ, ಬೇರೆ ಏನನ್ನು ಮಾಡುವುದಿಲ್ಲ. ಇಂತಹವರನ್ನು ಬಂಧಿಸಲು ಆಗಮಿಸಿದ್ದು ಖಂಡನೀಯವಾಗಿದೆ. ಅರಣ್ಯಾಧಿಕಾರಿಗಳು ತಮ್ಮ ಪ್ರಚಾರಕ್ಕೆ ಆಗಮಿಸಿದ್ದಾರೆ ಎಂದು ಆರಗ ಜ್ಞಾನೇಂದ್ರ ಆರೋಪಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.