ಮನೆ ಅಪರಾಧ ಮಂಡ್ಯ: ಹಣಕಾಸು ವಿಚಾರಕ್ಕೆ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ

ಮಂಡ್ಯ: ಹಣಕಾಸು ವಿಚಾರಕ್ಕೆ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ

0

ಮಂಡ್ಯ: ಹಣಕಾಸು ವಿಚಾರಕ್ಕೆ ವ್ಯಕ್ತಿ ಮೇಲೆ ಚಾಕುವಿನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ನಾಗಮಂಗಲ ಪಟ್ಟಣದ ಮುಸ್ಲಿಂ ಬ್ಲಾಕ್ ಬಳಿ ನೆನ್ನೆ ಸಂಜೆ ನಡೆದಿದೆ.

ಹಾಡುಹಗಲೇ ವ್ಯಕ್ತಿ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಲಾಗಿದ್ದು, ಸ್ಥಳೀಯರು ಚಾಕು ಹಿಡಿದುವಿನಿಂದ ಲ್ಲೆ ನಡೆಸುತ್ತಿದ್ದ ವ್ಯಕ್ತಿಯನ್ನು ಹಿಡಿದು ಸಮಧಾನ ಮಾಡಿದ್ದಾರೆ.

ಕುರುಂ ಪಾಷ ಎಂಬ ವ್ಯಕ್ತಿಯಿಂದ ಖದೀರ್ ಪಾಷ ಎಂಬ ವ್ಯಕ್ತಿ ಮೇಲೆ ಹಲ್ಲೆ ನಡೆಸಲಾಗಿದೆ.

ಗಾಯಗೊಂಡ ವ್ಯಕ್ತಿಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.