ಮೈಲಾರ ಲಿಂಗ ಹಿಂದೂ ದೇವತೆ ಶಿವನ ಸ್ವರೂಪ. ಶಿವನು ಮಲ್ಲಾಸುರನನ್ನು ಸ೦ಹರಿಸಲು ಮೈಲಾರ ಲಿಂಗನಾಗಿ ಹುಟ್ಟಿದನೆಂದು ಪ್ರತೀತಿಯಿದೆ. ಉತ್ತರ ಕರ್ನಾಟಕದಲ್ಲಿ ಬಹಳ ಜನರ ಮನೆ ದೇವರು. ಹಾವೇರಿಗೆ ಸಮೀಪದಲ್ಲಿ ತುಂಗಭದ್ರ ನದಿ ದಡದಲ್ಲಿ ಮೈಲಾರ ಗ್ರಾಮ ಎ೦ಬ ಪ್ರಸಿಧ್ದ ಸ್ಥಳವಿದ್ದು, ಅಲ್ಲೊ೦ದು ಮೈಲಾರಲಿ೦ಗ ದೇವರ ಪ್ರಸಿದ್ಧ ದೇವಸ್ಥಾನವಿದೆ.
ಪುಣ್ಯಕ್ಷೇತ್ರವಾಗಿ ಮೈಲಾರಲಿಂಗ
ಮೈಲಾರಲಿಂಗ ಪುಣ್ಯಕ್ಷೇತ್ರ. ಕರ್ನಾಟಕ ರಾಜ್ಯದ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ಬಳಿಯಿರುವ ದೇವರಗುಡ್ಡದ ಮೇಲೆ ಮೈಲಾರಲಿಂಗ ದೇವಸ್ಥಾನವಿದೆ. ಪ್ರತಿವರ್ಷವೂ ಇಲ್ಲಿ ನಡೆಯುವ ಜಾತ್ರೆಗೆ ಪ್ರಾಮುಖ್ಯ ಇದೆ. ಸಾವಿರಾರು ಮಂದಿ ಭಕ್ತರು ಇಲ್ಲಿ ಕಲೆಯುತ್ತಾರೆ. ವರ್ಷದಲ್ಲಿ ಎರಡು ದಿವಸ ಜಾತ್ರೆ ವಿಶೇಷ ರೀತಿಯಿಂದ ನಡೆಯುತ್ತದೆ. ಜಾತ್ರಾ ಸಮಯದಲ್ಲಿ ಬಡಬಗ್ಗರಿಗೆ ಅನ್ನ ಸಂತರ್ಪಣೆ ಇರುತ್ತದೆ.
ಸ್ಥಳಪುರಾಣ
ಪ್ರಸ್ತುತ ಕ್ಷೇತ್ರದ ಸ್ಥಳಪುರಾಣದಂತೆ ಜನಗಳಿಗೆ ತೊಂದರೆ ಕೊಡುತ್ತಿದ್ದ ಮಣಿಮಲ್ಲಾಪುರ ಎಂಬ ರಾಕ್ಷಸನನ್ನು ಈಶ್ವರ ಗೊರವನ ವೇಷದಲ್ಲಿ ಬಂದು ಸಂಹರಿಸಿದನೆಂದು ಕಥೆ ಇದೆ. ಈ ರಾಕ್ಷಸ ಬ್ರಹ್ಮನನ್ನು ಪ್ರಾರ್ಥಿಸಿ ಯಾರಿಂದಲೂ ಸಾವು ಬಾರದೆ ಇರುವಂತೆ ವರ ಬೇಡುತ್ತಾನೆ. ಆದರೆ ಬ್ರಹ್ಮ ಇದಕ್ಕೆ ಕಿವಿಗೊಡದಿರಲು ಆತ ಪರಮೇಶ್ವರನನ್ನೇ ಕುರಿತು ಬೇಡುತ್ತಾನೆ. ಪರಮೇಶ್ವರ ಇದರಿಂದ ಕುಪಿತನಾಗಿ ತಲೆ ಕೊಡವುತ್ತಾನೆ. ಈಶ್ವರನ ತಲೆಯಿಂದ ತುಪ್ಪದ ಮಾಳಮ್ಮ ಎಂಬ ಹೆಣ್ಣು ಜನಿಸಿ ರಾಕ್ಷಸನನ್ನು ಕೊಲ್ಲಲು ಉದ್ಯುಕ್ತಳಾಗುತ್ತಾಳೆ. ಆಕೆಯಿಂದಲೂ ರಾಕ್ಷಸನನ್ನು ಕೊಲ್ಲಲು ಸಾಧ್ಯವಾಗದೆ ಹೋದಾಗ, ಪರಮೇಶ್ವರನೇ ಗೊರವರ ವೇಷದಲ್ಲಿ ಬಂದು ರಾಕ್ಷಸನನ್ನು ಕೊಂದು, ತುಪ್ಪದ ಮಾಳಮ್ಮನನ್ನು ಮದುವೆಯಾಗುತ್ತಾನೆ.
ಗೊರವರು
ಗೊರವರು ಎಂಬ ವೃತ್ತಿಗಾಯಕರು ಈ ಮೈಲಾರಲಿಂಗ ಕ್ಷೇತ್ರಕ್ಕೆ ಸಂಬಂಧಪಟ್ಟವರು. ಇವರ ವೇಷಭೂಷಣಗಳಿಂದ ಇವರನ್ನು ಸುಲಭವಾಗಿ ಗುರುತಿಸಬಹುದಾಗಿದೆ. ತಲೆಗೆ ಕರಡಿಯ ಚರ್ಮವನ್ನು ಟೋಪಿಯಾಗಿ ಧರಿಸುತ್ತಾರೆ. ಕೈಯಲ್ಲಿ ಡಮರುಗ, ಪಿಳ್ಳಂಗೋವಿ, ರುದ್ರಾಕ್ಷಿಮಣಿ ಹಾರ, ಎಲೆಯ ಸಂಚಿ, ದೋಣಿ (ಭಿಕ್ಷಾಪಾತ್ರೆ), ಹೊಕ್ಕಳಿನವರೆಗೂ ಹುಲಿಚರ್ಮ, ರಟ್ಟೆಗೆ ಬಳೆ, ಕಾಲಿಗೆ ಗೆಜ್ಜೆ, ಕೊರಳಿಗೆ ಕವಡೆ ಇವುಗಳಿಂದ ಶೃಂಗರಿಸಿಕೊಳ್ಳುತ್ತಾರೆ.
ಮೈಲಾರಲಿಂಗನ ಕೃಥಾಪರಂಪರೆಯನ್ನು ಇವರು ಉಳಿಸಿಕೊಂಡು ಬಂದಿದ್ದಾರೆ. ಕಥಾಪರಂಪರೆಗಿಂತ ರೋಮಾಂಚಕಾರಿ ಪವಾಡಗಳನ್ನು ಮಾಡುವಲ್ಲಿ ಇವರು ಹೆಸರಾದವರು. ಇವರ ನೃತ್ಯವೂ (ಗೊರವರ ಕುಣಿತ) ಬಹಳ ವೈವಿಧ್ಯಪೂರ್ಣವಾದುದೆನಿಸಿದೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.