ಮನೆ ರಾಜಕೀಯ ಕಾಂಗ್ರೆಸ್ ಪಕ್ಷದಲ್ಲಿ ಹಿಂದೂ ಪರ ಇರುವ ಒಬ್ಬ ನಾಯಕನೂ ಇಲ್ಲ: ಸಂಸದ ಪ್ರತಾಪ್ ಸಿಂಹ

ಕಾಂಗ್ರೆಸ್ ಪಕ್ಷದಲ್ಲಿ ಹಿಂದೂ ಪರ ಇರುವ ಒಬ್ಬ ನಾಯಕನೂ ಇಲ್ಲ: ಸಂಸದ ಪ್ರತಾಪ್ ಸಿಂಹ

0

ಮೈಸೂರು(Mysuru): ಕಾಂಗ್ರೆಸ್ ಪಕ್ಷದಲ್ಲಿ ಹಿಂದೂ ಪರ ಇರುವ ಒಬ್ಬ ನಾಯಕನೂ ಇಲ್ಲ  ಎಂದು ಸಂಸದ ಪ್ರತಾಪ್ ಸಿಂಹ(M.P.Prathap simha) ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳಿ ಗಲಾಟೆ ಪ್ರಕರಣದ ಆರೋಪಿಗಳ ಕುಟುಂಬಕ್ಕೆ ರಂಜಾನ್ ಹಿನ್ನೆಲೆಯಲ್ಲಿ ಶಾಸಕ  ಜಮೀರ್ ಅಹಮದ್ ಪಡಿತರ ವಿತರಿಸಿರುವುದನ್ನು ಪ್ರತಾಪ್ ಸಿಂಹ ಟೀಕಿಸಿದ್ದು, ಜಮೀರ್ ಮನಸ್ಥಿತಿ ಆರೋಪಿಗಳಿಗೆ ಬೆಂಬಲ ನೀಡುವುದು. ಇದು ಸಿದ್ದರಾಮಯ್ಯ ಕೃಪಾಕಟಾಕ್ಷದಿಂದಲೇ ಆಗಿದೆ. ಹಿಂದೆ ಡಿ ಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಯಲ್ಲೂ ಇವರು ಆರೋಪಿಗಳ ಪರ ಇದ್ದರು ಎಂದು ಆರೋಪಿಸಿದ್ದಾರೆ.

ಸಿದ್ದರಾಮಯ್ಯ ವೈಸ್ ಕ್ಯಾಪ್ಟನ್ ಜಮೀರ್. ಡಿ ಕೆ ಶಿವಕುಮಾರ್ ವೈಸ್ ಕ್ಯಾಪ್ಟನ್ ನಲಪಾಡ್. ಇವರಿಬ್ಬರ ಮೂಲಕ ಸಿದ್ದರಾಮಯ್ಯ, ಡಿಕೆಶಿ ಮುಸ್ಲಿಂ ಕ್ರಿಶ್ಚಿಯನ್ ಓಲೈಕೆಗೆ ನಿಂತಿದ್ದಾರೆ. ಪೊಲೀಸರ ಮೇಲೆ ನಡೆದ ಎಲ್ಲಾ ದೌರ್ಜನ್ಯದ ಹಿಂದೆ ಸಿದ್ದರಾಮಯ್ಯ ಇದ್ದಾರೆ. ದನಗಳ್ಳನ ಹಿಡಿದ ಪೊಲೀಸ್ ರನ್ನು ಅಮಾನತು ಮಾಡುತ್ತಾರೆ. ದನಗಳ್ಳನಿಗೆ ಪರಿಹಾರ ಕೊಡಿಸುತ್ತಾರೆ. ಜಮೀರ್ ಅಂತಹವರಿಂದ ಬೇರೆ ಏನು ನಿರೀಕ್ಷೆ ಮಾಡಬಹುದು.? ಎಂದು ಕಿಡಿಕಾರಿದರು.

ಪಿಎಸ್‌ ಐ ಪರೀಕ್ಷಾ ಅಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಪ್ರತಾಪ್ ಸಿಂಹ, ಪರೀಕ್ಷೆಯಲ್ಲಿ ಯಾರು ಅಕ್ರಮವೆಸಗಿದ್ದಾರೆ ಅವರ ಮೇಲೆ ಮಾತ್ರ ಕ್ರಮ ಕೈಗೊಳ್ಳಿ. ಪ್ರಾಮಾಣಿಕವಾಗಿ ಪರೀಕ್ಷೆ ಬರೆದವರಿಗೆ ಅನ್ಯಾಯವಾಗಬಾರದು ಎಂದು ಹೇಳಿದರು.

ಪರೀಕ್ಷಾ ಪತ್ರಿಕೆಯನ್ನು ಲ್ಯಾಬ್‌ ಗೆ ಕಳುಹಿಸಿ ಪರೀಕ್ಷೆ ಮಾಡಿಸಿ. ಅದರಲ್ಲಿ ಉತ್ತರ ಯಾವಾಗ ಬರೆದರು ಅನ್ನೋ ಸತ್ಯ ಗೊತ್ತಾಗಲಿದೆ. ಕಾಂಗ್ರೆಸ್,  ಜೆಡಿಎಸ್,  ಬಿಜೆಪಿ ಯಾವ ಪಕ್ಷದವರೇ ಇರಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಿ ಎಂದು ಸಿಎಂ ಬಸವರಾಜ ಬೊಮ್ಮಾಯಿಗೆ ಪ್ರತಾಪಸಿಂಹ ಒತ್ತಾಯ ಮಾಡಿದರು.

ಕಷ್ಟಪಟ್ಟು ಓದುವವರ ಆತ್ಮ ವಿಶ್ವಾಸ ಕುಗ್ಗಿಸಬೇಡಿ. ಪರೀಕ್ಷೆಗಳು ಪಾರದರ್ಶಕವಾಗಿರಬೇಕು. 50 ಲಕ್ಷ ಕೊಟ್ಟು ಪಿಎಸ್‌ಐ ಆದವರು ಯಾವ ರೀತಿ ಕೆಲಸ ಮಾಡಬಹುದು.? ಮೊದಲ ದಿನದಿಂದಲೇ ಲಂಚದ ಅಂಗಡಿ ತೆರೆಯುತ್ತಾರೆ. ಈಗಾಗಲೇ ಮಿನಿಟ್‌ ಗೆ ಮತ್ತೊಂದಕ್ಕೆ ಲಂಚ ಇದೆ. ಇದರಿಂದ ಜನ ಸಾಮಾನ್ಯರಾಗಿ ನ್ಯಾಯ ಹೇಗೆ ಕೊಡುತ್ತಾರೆ. ಪರೀಕ್ಷಾ ಅಕ್ರಮದ ಸಮಗ್ರ ತನಿಖೆಯಾಗಬೇಕು ಎಂದರು.

ಪ್ರಿಯಾಂಕ ಖರ್ಗೆ ಹೇಳಿಕೆ ಶೂರ

ಪಿಎಸ್‌ ಐ ಪರೀಕ್ಷಾ ಅಕ್ರಮ ನೋಟಿಸ್‌ ಗೆ ಶಾಸಕ ಪ್ರಿಯಾಂಕ್ ಖರ್ಗೆ ಉತ್ತರ ನೀಡದ ಕುರಿತು ಪ್ರತಿಕ್ರಿಯಿಸಿದ ಪ್ರತಾಪ್ ಸಿಂಹ, ಪ್ರಿಯಾಂಕ್ ಖರ್ಗೆ ಹಿಟ್ ಅಂಡ್ ರನ್ ನಾಯಕ. ಉಗುಳಿ ಓಡಿ ಹೋಗಿದ್ದಾರೆ ಅಷ್ಟೇ, ಆತ ಹೇಳಿಕೆ ಶೂರ. ಆತನನ್ನು ಗಂಭೀರವಾಗಿ ಪರಿಗಣಿಸಬೇಡಿ. ಸಾಕ್ಷಿ ಇದ್ದಿದ್ದರೆ ಕೊಡಲು ಏಕೆ ಭಯ. ಹಿಂದೆ ಬಿಟ್ ಕಾಯಿನ್ ವಿಚಾರದಲ್ಲೂ ಇದೇ ರೀತಿ ಮಾಡಿದ್ದರು. ಸಾಕ್ಷಿ ಕೊಡಿ ಅಂದ್ರೆ ಹಿಟ್ ಅಂಡ್ ರನ್ ಮಾಡುತ್ತಾರೆ ಎಂದರು.