ಕುಕ್ಕೆ ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ 28 ಸ್ಥಾನಗಳನ್ನು ಗೆಲ್ಲಲಿದೆ. ಈ ಬಾರಿ ಜೆಡಿಎಸ್ ಕೂಡ ಎನ್ಡಿಎ ಜೊತೆಯಿದ್ದು, ವಿಧಾನಸಭಾ ಚುನಾವಣೆಯಲ್ಲಿ ಕಳೆದುಕೊಂಡದ್ದನ್ನು ಬಡ್ಡಿ ಸಮೇತ ಪಡೆದುಕೊಳ್ಳಲಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಡಿ ವಿ ಸದಾನಂದ ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೇವರ ದರ್ಶನದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಅನೀರಿಕ್ಷಿತ ಹಿನ್ನಡೆಯಾಗಿದೆ. ಆದರೆ, ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಅಸಾಧ್ಯ. ಲೋಕಸಭಾ ಚುನಾವಣೆ ರಾಷ್ಟ್ರೀಯ ವಿಚಾರದಲ್ಲಿ ನಡೆಯುವ ಚುನಾವಣೆಯಾಗಿದೆ. ನರೇಂದ್ರ ಮೋದಿ ನೇತೃತ್ವದ ಒಂಬತ್ತುವರೆ ವರ್ಷದ ಆಡಳಿತ ಅತ್ಯಂತ ಯಶಸ್ವಿಯಾಗಿದೆ. ಅವರಿಂದ ಅಭಿವೃದ್ಧಿಗೆ ಅರ್ಥ ಬಂದಿದೆ ಎಂದರು.
ಬಿಜೆಪಿ ನನಗೆ ಎಲ್ಲವನ್ನೂ ನೀಡಿದೆ. ಎಂಎಲ್ಎ, ಎಂಪಿ, ಎಂಎಲ್ಸಿ, ಮುಖ್ಯಮಂತ್ರಿ, ಕೇಂದ್ರ ಸಚಿವ ಸ್ಥಾನ, ರಾಜ್ಯ, ರಾಷ್ಟ್ರೀಯ ಹುದ್ದೆಗಳನ್ನು ನೀಡಿದೆ. ನಾನು ಏನಾದರೂ ಪಕ್ಷಕ್ಕೆ ನೀಡುವುದೇ ಬಾಕಿ ಇರುವುದು. ಆದ್ದರಿಂದ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಎರಡು ತಿಂಗಳಲ್ಲೇ ಆಂತರಿಕ ಕಚ್ಚಾಟ ಆರಂಭಗೊಂಡಿದೆ. ಪಕ್ಷದಲ್ಲೇ ಶಾಸಕರು, ಸಚಿವರು ಅಸಮಾಧಾನ ಹೊರಹಾಕುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಮನೆಯೊಂದು ನೂರು ಬಾಗಿಲಿನಂತೆ ಇದೆ. ರಾಜ್ಯದ ಜನರೇ ರಾಜ್ಯದ ಕಾಂಗ್ರೆಸ್ ಸರ್ಕಾರ ಹೆಚ್ಚು ಸಮಯ ಉಳಿಯುವುದಿಲ್ಲ ಎನ್ನುತ್ತಿದ್ದಾರೆ. ಕಾಂಗ್ರೆಸ್ ಈ ಹಿಂದಿನಿಂದಲೂ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಲೇ ಬಂದಿದೆ ಎಂದು ತಿಳಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.