ಮನೆ ರಾಜಕೀಯ ಯಾರಾದ್ರೂ ಶಾಸಕರು ನನ್ನ ಪರವಾಗಿ ಮಾತನಾಡಿದ್ರೆ ನೋಟಿಸ್ ಇಶ್ಯೂ ಮಾಡ್ತೀನಿ ನನಗೆ ಯಾರ ಬೆಂಬಲವೂ ಬೇಡ:ಡಿಕೆಶಿ...

ಯಾರಾದ್ರೂ ಶಾಸಕರು ನನ್ನ ಪರವಾಗಿ ಮಾತನಾಡಿದ್ರೆ ನೋಟಿಸ್ ಇಶ್ಯೂ ಮಾಡ್ತೀನಿ ನನಗೆ ಯಾರ ಬೆಂಬಲವೂ ಬೇಡ:ಡಿಕೆಶಿ ಗರಂ

0

ಬೆಂಗಳೂರು : ನಾನೇ 5 ವರ್ಷ ಸಿಎಂ ಆಗಿ ಮುಂದುವರೆಯುತ್ತೇನೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ಇದರ ನಡುವೆ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರು ಡಿಸಿಎಂ., ಡಿ.ಕೆ ಶಿವಕುಮಾರ್ ಅವರ ಪರ ಬ್ಯಾಟ್ ಬೀಸಿದ್ದರು. ಒಂದೂವರೆ ವರ್ಷದ ಬಳಿಕ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ ಎಂದು ಹೇಳಿಕೆ ನೀಡಿದ್ದರು. ಈ ಸಂಬಂಧ ಈಗ ಡಿ.ಕೆ ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

ಯಾರಾದ್ರೂ ಶಾಸಕರು ನನ್ನ ಪರವಾಗಿ ಮಾತನಾಡಿದ್ರೆ ನೋಟಿಸ್ ಇಶ್ಯೂ ಮಾಡ್ತೀನಿ. ಪಕ್ಷದಲ್ಲಿ ಒಂದು ಶಿಸ್ತು ಇರಬೇಕು ಎಂದು ಶಾಸಕರ ವಿರುದ್ಧ ಗರಂ ಆಗಿದ್ದಾರೆ.. ನನಗೆ ಯಾವ ಶಾಸಕರ ಬೆಂಬಲನೂ ಬೇಡ, ಯಾವ ಶಾಸಕರೂ ಬೇಡ. ರಾಮನಗರ ಎಂ.ಎಲ್.ಎ ಇಕ್ಬಾಲ್ ಹುಸೇನ್​ಗೆ ನೋಟಿಸ್ ಕೊಡಬೇಕು ಎಂದು ಕೊಂಡಿದ್ದೀನಿ. ನನಗೆ ಯಾರ ರೆಕಮೆಂಡೇಶನ್ ಕೂಡ ಬೇಡ. ಐ ಡೋಂಟ್ ವಾಂಟ್ ಏನೀ ರೆಕಮೆಂಡೇಶನ್ ಎಂದು ಡಿ.ಕೆ ಶಿವಕುಮಾರ್ ಗುಡುಗಿದ್ದಾರೆ.

ಡಿ.ಕೆ. ಶಿವಕುಮಾರ್‌‌‌ ನಾಳೆ ಬೆಳಗ್ಗೆಯೇ ಮುಖ್ಯಮಂತ್ರಿಯಾದರೆ ನಮ್ಮ 19 ಶಾಸಕರ ಬೆಂಬಲ ನೀಡುತ್ತೇನೆಂದು ಹೆಚ್​ಡಿ ಕುಮಾರಸ್ವಾಮಿಯವರು ಹೇಳಿಕೆ ನೀಡಿದ್ದರು. ಸದ್ಯ ಡಿ.ಕೆ ಶಿವಕುಮಾರ್​ಗೆ ಸಿಎಂ ಆಗಲು ಬೆಂಬಲ ಕೊಡುವ ಮೂಲಕ ಒಕ್ಕಲಿಗ ಅಸ್ತ್ರ ಪ್ರಯೋಗ ಮಾಡಲು ಹೆಚ್.​ಡಿ ಕುಮಾರಸ್ವಾಮಿ ಮುಂದಾಗಿದ್ದಾರೆ. ಒಕ್ಕಲಿಗ ಅಸ್ತ್ರ ಪ್ರಯೋಗದ ಮೂಲಕ ಡಿಕೆ ಬ್ರದರ್ಸ್ ಗೆ ಟಕ್ಕರ್ ಕೊಡಲಿದ್ದಾರೆ. ಡಿ.ಕೆ ಶಿವಕುಮಾರ್ ಜೆಡಿಎಸ್ ಶಾಸಕರನ್ನ ಸೆಳೆಯಲು ಮುಂದಾಗಿದ್ದರು. ಹೀಗಾಗಿ ಡಿಕೆ ಬ್ರದರ್ಸ್ ಓಟಕ್ಕೆ ಬ್ರೇಕ್ ಹಾಕಲು ಹೆಚ್.​ಡಿ ಕುಮಾರಸ್ವಾಮಿ ಒಕ್ಕಲಿಗಸ್ತ್ರ ಪ್ರಯೋಗ ಮಾಡಿದ್ದಾರೆ.

ಡಿ.ಕೆ ಶಿವಕುಮಾರ್ ನಾಳೆ ಸಿಎಂ ಆಗೋದಾದ್ರೆ 19 ಜನ ಶಾಸಕರ ಬೆಂಬಲ ಘೋಷಣೆ ಮೂಲಕ ನಾನು ಸಮುದಾಯದ ನಾಯಕನ ಪರ ಅನ್ನೋ ಸಂದೇಶವನ್ನು ಹೆಚ್​ಡಿ ಕುಮಾರಸ್ವಾಮಿ ಕೊಟ್ಟಿದ್ದಾರೆ. ಮತ್ತೊಂದೆಡೆ ಒಂದು ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದ್ರಾ ಎಂಬ ಅಂಶ ವ್ಯಕ್ತವಾಗುತ್ತಿದೆ. ಒಂದು ಕಡೆ ಡಿಕೆ ಬ್ರದರ್ಸ್ ಆಪರೇಷನ್ ಹಸ್ತಕ್ಕೆ ಕೌಂಟರ್ ಕೊಟ್ಟರೆ ಮತ್ತೊಂದೆಡೆ ತಾಖತ್ ಇದ್ರೆ ಡಿಕೆಶಿ ಸಿಎಂ ಮಾಡಿ ಎಂದು ಕಾಂಗ್ರೆಸ್ ಗೆ ಒತ್ತಡ ಹಾಕೋ ಪ್ಲಾನ್ ಮಾಡಿದ್ದಾರೆ.