ಮನೆ ರಾಜ್ಯ ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಗ್ಯಾಂಗ್​’ನ 9 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಗ್ಯಾಂಗ್​’ನ 9 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

0

ಬೆಂಗಳೂರು: ಎಂಎಲ್ ಎ ಟಿಕೆಟ್​ ಆಮಿಷವೊಡ್ಡಿ ಉದ್ಯಮಿಯಿಂದ 5 ಕೋಟಿ ಹಣ ಪಡೆದು ವಂಚನೆ ಮಾಡಿದ್ದ ಚೈತ್ರಾ ಕುಂದಾಪುರ ಗ್ಯಾಂಗ್​ ಪ್ರಕರಣ ಸಂಬಂಧ 1ನೇ ಎಸಿಎಂಎಂ ನ್ಯಾಯಾಲಯಕ್ಕೆ 9 ಆರೋಪಿಗಳ ವಿರುದ್ಧ ಸಿಸಿಬಿ ಅಧಿಕಾರಿಗಳು ಚಾರ್ಜ್​​ಶೀಟ್ ಸಲ್ಲಿಸಿದ್ದಾರೆ.

ಚೈತ್ರಾ ಕುಂದಾಪುರ, ಹಾಲಶ್ರೀ ಸೇರಿ 9 ಮಂದಿ ವಿರುದ್ಧ ಚಾರ್ಜ್ ​ಶೀಟ್ ಸಲ್ಲಿಸಲಾಗಿದೆ. ಸಿಸಿಬಿ ಅಧಿಕಾರಿಗಳು 75 ಮಂದಿ ಸಾಕ್ಷಿಗಳ ಹೇಳಿಕೆ ದಾಖಲಿಸಿ ಸುಮಾರು 800 ಪುಟಗಳ ಚಾರ್ಜ್ ​ಶೀಟ್ ಸಲ್ಲಿಸಿದ್ದಾರೆ.

ಡಿಜಿಟಲ್ ಸಾಕ್ಷಿಗಳು, ಬ್ಯಾಂಕ್ ಸ್ಟೇಟ್ ಮೆಂಟ್ ​ಗಳು, ಸಾಂದರ್ಭಿಕ ಸಾಕ್ಷಿಗಳು, ಸ್ವಾಮಿಜಿ ಕಾರು ಚಾಲಕ ಹಣ ಇಟ್ಟು ಹೋಗಿದ್ದ ಬಗ್ಗೆ ಮೈಸೂರು ಮೂಲದ ವ್ಯಕ್ತಿಯು ನೀಡಿದ ಹೇಳಿಕೆ ಸೇರಿದಂತೆ ಸ್ಪಾಟ್ ಮಹಜರ್ ನಡೆಸಿ ಹಣ ಸೀಜ್ ಮಾಡಿದ ಸ್ಥಳಗಳ ಬಗ್ಗೆ ಸಿಸಿಬಿ ಪೊಲೀಸರು ಚಾರ್ಜ್ ​​ಶೀಟ್ ​ನಲ್ಲಿ ಉಲ್ಲೇಖಿಸಿದ್ದಾರೆ.

ಸಿಸಿಬಿ ತಂಡ ಚೈತ್ರಾ ವಂಚನೆ ಪ್ರಕರಣದ ತನಿಖೆ ಪೂರ್ಣಗೊಳಿಸಿದ್ದು, ಎಂಎಲ್ಎ ಟಿಕೆಟ್ ಡೀಲ್ ಸಂಬಂಧ 68 ಸಾಕ್ಷ್ಯಗಳನ್ನ ಕಲೆ ಹಾಕಿ, 75 ಮಂದಿ ಸಾಕ್ಷಿಗಳ ಹೇಳಿಕೆ ದಾಖಲಿಸಿ ಸುಮಾರು 800 ಪುಟಗಳ ಚಾರ್ಜ್​ ಶೀಟ್ ಸಲ್ಲಿಸಿದೆ. ಚೈತ್ರಾ ವಂಚನೆ ಪ್ರಕರಣದಲ್ಲಿ‌ ಬರೋಬ್ಬರಿ 4 ಕೋಟಿ 11 ಲಕ್ಷ ರೂಪಾಯಿ ರಿಕವರಿ ಮಾಡಲಾಗಿದೆ.

ಸಿಸಿಬಿ ಪೊಲೀಸರು ದೂರುದಾರ ಗೋವಿಂದ ಬಾಬು ಪೂಜಾರಿ ಬಳಿ ಎಲ್ಲಾ ಆಡಿಯೋ, ವಿಡಿಯೋವನ್ನು ಪಡೆದಿದ್ದಾರೆ. ಆಡಿಯೋ, ವಿಡಿಯೋಗಳ ಬಗ್ಗೆ ಚಾರ್ಜ್ ಶೀಟ್ ನಲ್ಲಿ‌ ಉಲ್ಲೇಖಿಸಲಾಗಿದೆ. ಗೋವಿಂದ ಪೂಜಾರಿ ಬಳಿಯೇ ಡೀಲ್ ಸಂಬಂಧ 10 ವಿಡಿಯೋ ಪಡೆಯಲಾಗಿದೆ. ಆರೋಪಿಗಳ ಮೊಬೈಲ್ ಗಳ ಡೇಟಾ ರಿಟ್ರೀವ್ ವರದಿ ಕೂಡ ಉಲ್ಲೇಖಿಸಲಾಗಿದೆ. ಆರೋಪಿಗಳ ಮೊಬೈಲ್ ಚಾಟ್, ಕರೆಗಳ ಸಂಬಂಧ ಡೇಟಾ ರಿಟ್ರೀವ್ ಮಾಡಿ ವರದಿ ಸಲ್ಲಿಸಲಾಗಿದೆ.

ಸದ್ಯ ಚೈತ್ರಾ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.