ಮನೆ ಕಾನೂನು ಸರ್ಕಾರದ ವಿವಿಧ ಯೋಜನೆಗಳಲ್ಲಿ ಪ್ರಗತಿ ಸಾಧಿಸದ ಪಿಡಿಒ ಅಮಾನತು

ಸರ್ಕಾರದ ವಿವಿಧ ಯೋಜನೆಗಳಲ್ಲಿ ಪ್ರಗತಿ ಸಾಧಿಸದ ಪಿಡಿಒ ಅಮಾನತು

0

ಮಂಡ್ಯ:ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳಲ್ಲಿ ಪ್ರಗತಿ ಸಾಧಿಸದ ಕಾರಣ, ನಾಗಮಂಗಲ ತಾಲ್ಲೂಕಿನ ಚುಂಚನಹಳ್ಳಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೈಯದ್ ಇಮ್ರಾನ್ ಅಲಿ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಸಿಇಒ ಶೇಖ್‌ ತನ್ವಿರ್ ಆಸೀಫ್‌ ಆದೇಶಿಸಿದ್ದಾರೆ.
ಸೈಯದ್ ಇಮ್ರಾನ್ ಅಲಿ 2023ರ ಅಕ್ಟೋಬರ್‌ ಅಂತ್ಯಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನರೇಗಾ ಯೋಜನೆ, ವಸತಿ ಯೋಜನೆ, ಆಸ್ತಿ ಸಮೀಕ್ಷೆ ಹಾಗೂ ಡಿಸಿಬಿ ಯೋಜನೆಗಳಲ್ಲಿ ನಿಗದಿತ ಅವಧಿಯಲ್ಲಿ ಪ್ರಗತಿ ಸಾಧಿಸದೇ ಇರುವುದರಿಂದ ಅಮಾನತು ಮಾಡಲಾಗಿದೆ.