ಮೈಸೂರು: ಯಾವುದೇ ರೀತಿಯ ತಾರತಮ್ಯವಿಲ್ಲದೇ ಮಕ್ಕಳನ್ನು ರಕ್ಷಿಸುವ ಮತ್ತು ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಜವಾಬ್ದಾರಿಯಾಗಿದ್ದು, ಈ ಕುರಿತಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಕಾಯಿದೆಯನ್ನು ಸಮರ್ಪಕವಾಗಿ ಅನುಷ್ಠಾನ ಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಸದಸ್ಯರಾದ ಮಂಜು ಎಸ್. ಅವರು ತಿಳಿಸಿದರು.
ಇಂದು ಜಿಲ್ಲಾ ಪಂಚಾಯತ್ ಕಛೇರಿಯ ಡಿ. ದೇವರಾಜ ಅರಸು ಸಭಾಂಗಣದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತು ಮತ್ತು ಅವುಗಳ ರೂಪುರೇಷೆಗಳನ್ನು ತಯಾರಿಸುವ ಬಗ್ಗೆ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.
ರಾಜ್ಯ ಮಕ್ಕಳ ರಕ್ಷಣಾ ಆಯೋಗವು ಮಕ್ಕಳ ರಕ್ಷಣೆಗೆ ಬದ್ದವಾಗಿದ್ದು, ಅವುಗಳ ಉಲ್ಲಂಘನೆಯಾಗಂತೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ತಮಗೆ ನಿಗದಿ ಪಡಿಸಿರುವ ಕರ್ತವ್ಯಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಕಾಯಿದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ, ಮಕ್ಕಳ ಹಕ್ಕುಗಳನ್ನು ರಕ್ಷಿಸಬೇಕು ಎಂದು ಸದಸ್ಯರು ತಿಳಿಸಿದರು.
ಶಾಲೆಗಳಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗದಂತೆ ಎಲ್ಲಾ ಮುನ್ನೆಚ್ಚರಿಕೆ ಕೈಗೊಂಡು, ಮಕ್ಕಳ ಹಕ್ಕುಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹೆಚ್ಚಾಗಿ ಹಮ್ಮಿಕೊಳ್ಳಬೇಕು ಎಂದು ತಿಳಿಸಿದ ಅವರು ಮಕ್ಕಳಿಗೆ ಶೌಚಾಲಯ, ಪುಸ್ತಕ, ಸಮವಸ್ತ್ರ ಸೇರಿದಂತೆ ಸರ್ಕಾರದಿಂದ ನೀಡುವ ಅಗತ್ಯ ಮಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಅವರು ತಿಳಿಸಿದರು.
ಎಲ್ಲಾ ಶಾಲೆಗಳಲ್ಲಿ ದೂರು ಪೆಟ್ಟಿಗೆ ಅಳವಡಿಸಿ, 1098 ಶಾಲೆಗಳಲ್ಲಿ ಚೈಲ್ಡ್ಲೈನ್ ಸಂಖ್ಯೆಯನ್ನು ಕಡ್ಡಾಯವಾಗಿ ಅಳವಡಿಸಬೇಕು. ಎಲ್ಲಾ ಶಾಲಾ ಕಾಲೇಜುಗಳಲ್ಲಿ ಪೋಕ್ಸೋ ಕಾಯಿದೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಶಾಲಾ ವಾಹನಗಳಲ್ಲಿ ಮಕ್ಕಳ ನಿಗದಿಗಿಂತ ಹೆಚ್ಚು ಕರೆದುಕೊಂಡು ಹೋಗುತ್ತಿರುವುದು ಕಂಡು ಬರುತ್ತಿದ್ದು ಈ ಬಗ್ಗೆ ಆರ್.ಟಿ.ಓ. ಅಧಿಕಾರಿಗಳು ಪರಿಶೀಲಿಸಿ ಅಗತ್ಯ ಕೈಗೊಳ್ಳಬೇಕು. ಅಲ್ಲಿ ಹೆಚ್ಚು ಬಸ್ ಗಳನ್ನು ನಿಯೋಜಿಸಬೇಕು ಎಂದು ಅವರು ತಿಳಿಸಿದರು.
ಯಾವುದೇ ರೀತಿಯ ತಾರತಮ್ಯವಿಲ್ಲದೇ ಮಕ್ಕಳನ್ನು ರಕ್ಷಿಸುವ ಮತ್ತು ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಜವಾಬ್ದಾರಿಯಾಗಿದ್ದು, ಈ ಕುರಿತಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಕಾಯಿದೆಯನ್ನು ಸಮರ್ಪಕವಾಗಿ ಅನುಷ್ಠಾನ ಗೊಳಿಸಬೇಕು ಎಂದು ಅವರು ತಿಳಿಸಿದರು.
ಮಕ್ಕಳಿಗೆ ಅವರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಿ, ಮಕ್ಕಳ ಹಕ್ಕುಗಳ ಕುರಿತು ಅಧಿಕಾರಿ ಹಾಗೂ ಸಿಬ್ಬಂದಿಗೆ ಕಾನೂನು ಅರಿವು ಮೂಡಿಸಬೇಕು. ಆಸ್ಪತ್ರೆಗಳಲ್ಲಿ ಮಕ್ಕಳ ಆರೋಗ್ಯ ತಪಾಸಣೆ ವೇಳೆ ವೈದ್ಯರು ತಾತ್ಸರಾ ಮಾಡದೆ ಅವರಿಗೆ ಸ್ಪಂದಿಸಿ ಅಗತ್ಯ ವೈದ್ಯಕೀಯ ನೆರವು ನೀಡಬೇಕು. ಜಿಲ್ಲೆಯಲ್ಲಿ ಬಾಲ್ಯ ವಿವಾಹ, ಬಾಲ ಕಾರ್ಮಿಕ ಪ್ರಕರಣಗಳು ಕಡಿಮೆಯಾಗಬೇಕು. ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡುವಲ್ಲಿ ಅಧಿಕಾರಿಗಳು ಸೂಕ್ತ ಕ್ರಮ ಜರುಗಿಸಬೇಕು ಎಂದು ತಿಳಿಸಿದರು.
ಶಾಲೆಗಳಲ್ಲಿರುವ ಪಾಠ ಭೋಧನೆ, ಶಾಲಾ ಮಕ್ಕಳ ಹಾಜರಾತಿ, ದಾಖಲಾತಿಯನ್ನು ಪರಿಶೀಲಿಸಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಮರಳಿ ಶಾಲೆಗೆ ಕರೆತರುವಲ್ಲಿ ಕಟ್ಟು ನಿಟ್ಟಿನ ಕ್ರಮಗಳನ್ನು ಕ್ಯಗೊಂಡು ವಿವಿಧ ರೀತಿಯ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ಮಕ್ಕಳ ರಕ್ಷಣೆಗೆ ಮತ್ತು ಮಕ್ಕಳ ಸಮಗ್ರ ಬೆಳವಣಿಗೆಗೆ ಎಲ್ಲಾ ಇಲಾಖೆಗಳು ಪೂರಕ ವಾತಾವರಣ ನಿರ್ಮಾಣ ಮಾಡುವುದರ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು, ಮಕ್ಕಳ ರಕ್ಷಣೆಗಾಗಿ ರೂಪಿಸಿರುವ ಕಾಯ್ದೆಯ ಆಶಯ ಮತ್ತು ಉದ್ದೇಶಗಳನ್ನು ಯಶಸ್ವಿಯಾಗಿ ಜಾರಿಗೊಳಿಸಬೇಕು ಎಂದು ಅವರು ತಿಳಿಸಿದರು.
ಮಕ್ಕಳ ರಕ್ಷಣೆಗಾಗಿ ಕಾರ್ಯನಿರ್ವಹಿಸುವ ಎಲ್ಲಾ ಅನುಷ್ಠಾನ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಮಕ್ಕಳ ಹಕ್ಕುಗಳ ರಕ್ಷಣೆಗೆ ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧ ಇರುವ ಕಾಯ್ದೆಯ ಬಗ್ಗೆ ಅಧಿಕಾರಿಗಳು ಹೆಚ್ಚು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ ಅವರು ತಿಳಿಸಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಬಸವರಾಜು, ಜಿಲ್ಲಾ ರಕ್ಷಣಾ ಘಟಕದ ಅಧಿಕಾರಿ ಯೊಗೇಶ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.