ಮನೆ ರಾಜ್ಯ ಆರ್.ಡಿ.ಪಾಟೀಲ್ ರಕ್ಷಣೆಗೆ ಪ್ರಿಯಾಂಕ್ ಖರ್ಗೆ ನಿಂತಿದ್ದಾರೆ: ಅರಗ ಜ್ಞಾನೇಂದ್ರ ಆರೋಪ

ಆರ್.ಡಿ.ಪಾಟೀಲ್ ರಕ್ಷಣೆಗೆ ಪ್ರಿಯಾಂಕ್ ಖರ್ಗೆ ನಿಂತಿದ್ದಾರೆ: ಅರಗ ಜ್ಞಾನೇಂದ್ರ ಆರೋಪ

0

ಬೆಂಗಳೂರು: ಆರ್.ಡಿ.ಪಾಟೀಲ್ ರಕ್ಷಣೆಗೆ ಸಚಿವ ಪ್ರಿಯಾಂಕ್ ಖರ್ಗೆ ನಿಂತಿದ್ದಾರೆ ಎಂದು ಮಾಜಿ ಗೃಹಸಚಿವ ಅರಗ ಜ್ಞಾನೇಂದ್ರ ಆರೋಪಿಸಿದ್ದಾರೆ.

ಕೆಇಎ ನಡೆಸಿದ ಎಫ್​ ಡಿಎ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿ ಆರ್ ​ಡಿ ಪಾಟೀಲ್ ತಲೆಮರಿಸಿಕೊಂಡಿದ್ದು, ಈ ಕುರಿತು ಪ್ರತಿಕ್ರಿಯಿಸಿದ ಅವರು, ಎಲ್ಲಾ ಪರೀಕ್ಷೆಗಳಲ್ಲೂ ಆರ್​.ಡಿ.ಪಾಟೀಲ್​ ಅಕ್ರಮ ಮಾಡಿದ್ದಾನೆ. ನಮ್ಮ ಸರ್ಕಾರ ಇದ್ದಾಗ ಹೆಡೆಮುರಿ ಕಟ್ಟಿ ಬಂಧಿಸಿದ್ದವು. ಬಳಿಕ ಜಾಮೀನಿನ ಮೇಲೆ ಆರ್​.ಡಿ.ಪಾಟೀಲ್ ಹೊರ ಬಂದಿದ್ದ. ಈಗ ಆರ್.ಡಿ ಪಾಟೀಲ್​ ತಪ್ಪಿಸಿಕೊಂಡು ಹೋಗಲು ಬಿಟ್ಟಿದ್ಯಾರು? ಪೊಲೀಸರ ಕೈವಾಡವಿಲ್ಲದೆ ಆತ ತಪ್ಪಿಸಿಕೊಂಡು ಹೋಗಲು ಆಗಲ್ಲ.

ಆರ್.ಡಿ.ಪಾಟೀಲ್ ರಕ್ಷಣೆಗೆ ಪ್ರಿಯಾಂಕ್ ಖರ್ಗೆ ನಿಂತಿದ್ದಾರೆ. ಪರೀಕ್ಷಾ ಕೇಂದ್ರ  ಆಯ್ಕೆ​ ಮಾಡುವುದು ಸಹ ಆರ್​.ಡಿ.ಪಾಟೀಲ್​​. ಇಂತಹ ವ್ಯಕ್ತಿಗಳಿಗೆ ರಕ್ಷಣೆ ಕೊಡುವುದು ಕಾಂಗ್ರೆಸ್ ಸರ್ಕಾರದವರು. ಪೊಲೀಸರ ವಿರುದ್ಧವೂ ತನಿಖೆ ಮಾಡಲಿ  ಎಂದು ಅರಗ ಜ್ಞಾನೇಂದ್ರ ಆಗ್ರಹಿಸಿದರು.