ಮನೆ ರಾಜ್ಯ ಬಸ್ ಪ್ರಯಾಣ ದರ ಏರಿಕೆ  ಪ್ರಸ್ತಾಪ ಮುಂದೂಡಿಕೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬಸ್ ಪ್ರಯಾಣ ದರ ಏರಿಕೆ  ಪ್ರಸ್ತಾಪ ಮುಂದೂಡಿಕೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

0

ದೇವನಹಳ್ಳಿ: ಪ್ರಯಾಣಿಕರ ಹಿತವನ್ನು ಗಮನದಲ್ಲಿಟ್ಟುಕೊಂಡು ಬಸ್‌ ಪ್ರಯಾಣ ದರ ಏರಿಕೆ ಮಾಡುವ ಪ್ರಸ್ತಾಪವನ್ನು ಮಂದೂಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಪಟ್ಟಣದ ಸಂತೆ ಮೈದಾನದ ಹಿಂಭಾಗದಲ್ಲಿರುವ ಬಿಎಂಟಿಸಿ ಬಸ್‌ ಡಿಪೊಗೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅವರು ಮಾತನಾಡಿದರು.

ರಾಜ್ಯದಲ್ಲಿ ಸಾರಿಗೆ ಪ್ರಯಾಣ ದರ ಹೆಚ್ಚಳ ಕುರಿತಂತೆ ಆಯೋಗ ರಚನೆಗಾಗಿ ಮಾಜಿ ಐಎಎಸ್‌ ಅಧಿಕಾರಿ ಶ್ರೀನಿವಾಸ್‌ ಮೂರ್ತಿ, ಅವರು ನಾಲ್ಕು ನಿಗಮಗಳಿಗೆ ಸೇರಿದಂತೆ 150 ಪುಟಗಳ ವರದಿ ನೀಡಿದ್ದಾರೆ. ಪ್ರತಿ ನಿತ್ಯ ಸರ್ಕಾರಿ ಬಸ್‌ಗಳನ್ನು 1.20 ಕೋಟಿ ಜನರು ಪ್ರಯಾಣ ಮಾಡುತ್ತಿದ್ದಾರೆ. ಆಯೋಗ ರಚನೆ ಮಾಡಿದರೇ ಪ್ರಯಾಣ ದರ ಹೆಚ್ಚು ಮಾಡಬೇಕಾಗುತ್ತದೆ. ಹೀಗಾಗಿ ಆ ಪ್ರಸ್ತಾವವನ್ನು ಮುಂದೂಡಲಾಗಿದೆ ಎಂದರು.

ಬಸ್‌ ಪ್ರಯಾಣ ದರವನ್ನು ಹೆಚ್ಚಳ ಮಾಡುವುದರಿಂದ ಶ್ರೀ ಸಾಮಾನ್ಯರಿಗೆ ತೊಂದರೆಯಾಗುತ್ತದೆ. ರಾಜ್ಯ ಸಾರಿಗೆ ಸಂಸ್ಥೆಯೂ ಸೇವಾ ಮನೋಭಾವದಿಂದ ನಡೆಯುತ್ತಿದ್ದು, ಲಾಭದ ಉದ್ದೇಶವಿಲ್ಲ. ಪ್ರತಿ ವರ್ಷ ಕೃಷಿ, ಶಿಕ್ಷಣಕ್ಕಾಗಿ ಸಾವಿರಾರು ಕೋಟಿ ಸರ್ಕಾರ ಖರ್ಚು ಮಾಡುತ್ತದೆ. ಅದೇ ರೀತಿ ಸಾರಿಗೆಗೂ ವ್ಯಯ ಮಾಡುತ್ತೇವೆ ಎಂದರು.

ರಾಜ್ಯದಲ್ಲಿ ಬರ ಇರುವುದರಿಂದ ಈ ಬಾರಿ ದಸಾರವನ್ನು ಸರಳವಾಗಿ ಆಚರಣೆ ಮಾಡಲಾಯಿತು. ಆದ್ದರಿಂದ ಟಿಪ್ಪು ಜಯಂತಿ ಆಚರಣೆ ಮಾಡಲಾಗುತ್ತಿಲ್ಲ ಎಂದು ಹೆಳಿದರು.

ಈ ವರೆಗೂ ಜಾತಿ ಗಣತಿಯ ವರದಿಯೂ ರಾಜ್ಯ ಸರ್ಕಾರ ಮಂಡನೆ ಮಾಡಿಲ್ಲ, ವರದಿಯಲ್ಲಿ ಏನಿದೆ ಎಂಬುದು ನನಗೆ ತಿಳಿದಿಲ್ಲ. ಯಾವ ಮಾಹಿತಿ ಆಧಾರದಲ್ಲಿ ಶಾಮನೂರು ಶಿವಶಂಕರಪ್ಪ ಜಾತಿ ಗಣತಿ ವರದಿ ಬಗ್ಗೆ ಪ್ರತಿಕ್ರಿಯಿಸಿದ್ದಾರೋ ಗೊತ್ತೊಲ್ಲ ಎಂದು ತಿಳಿಸಿದರು.

ಬಸ್‌ ಘಟಕದ ನಿರ್ವಹಣೆ, ಸಿಬ್ಬಂದಿ ಕೊಠಡಿ ಸೇರಿದಂತೆ ಘಟಕದಲ್ಲಿರುವ ಬಸ್‌ಗಳನ್ನು ವೀಕ್ಷಿಸಿದರು. ಅಧಿಕಾರಿಗಳೊಂದಿಗೆ ಮಾಹಿತಿ ಪಡೆದ ಸಚಿವರು, ಬಸ್‌ಗಳನ್ನು ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡುತ್ತಿರುವ ಸಿಬ್ಬಂದಿಗೆ ಪ್ರಶಂಸೆ ವ್ಯಕ್ತಪಡಿಸಿ, ಬೇಡಿಕೆ ಹೆಚ್ಚಾಗಿರುವ ಬಸ್‌ ರೂಟ್‌ ಗಳ ಕುರಿತು ಚರ್ಚಿಸಿದರು.