ಮನೆ ಸ್ಥಳೀಯ ಹಾಡುಹಗಲೇ ಮೇಕೆ ಮೇಲೆ ಚಿರತೆ ದಾಳಿ: ಗ್ರಾಮಸ್ಥರಲ್ಲಿ ಆತಂಕ

ಹಾಡುಹಗಲೇ ಮೇಕೆ ಮೇಲೆ ಚಿರತೆ ದಾಳಿ: ಗ್ರಾಮಸ್ಥರಲ್ಲಿ ಆತಂಕ

0

ಮಂಡ್ಯ: ಹಾಡುಹಗಲೇ ಚಿರತೆ ಮೇಕೆ ಮೇಲೆ ದಾಳಿ ನಡೆಸಿ, ಹೊತ್ತೊಯ್ದಿರುವ ಘಟನೆ  ಮಳವಳ್ಳಿ ತಾಲ್ಲೂಕಿನ ನೆಲಮಾಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಚಿಕ್ಕತಾಯಮ್ಮ ಎಂಬುವವರಿಗೆ ಸೇರಿದ ಮೇಕೆಯನ್ನು ಚಿರತೆ ಹೊತ್ತೊಯ್ದಿದ್ದು, ಗ್ರಾಮದ ಸಮೀಪದ ಜಮೀನಿನಲ್ಲಿ ಮೇಕೆ-ಕುರಿಗಳನ್ನು ಮೇಯಿಸುವ ವೇಳೆ ಮೇಯುತ್ತಿದ್ದ ಚಿರತೆ ಮೇಕೆ ಮೇಲೆ ದಾಳಿ ನಡೆಸಿ ಕಬ್ಬಿನ ಗದ್ದೆಗೆ ಎಳೆದೊಯ್ದಿದೆ.

ಸುಮಾರು 10 ಸಾವಿರಕ್ಕೂ ಹೆಚ್ಚು ಬೆಲೆ ಬಾಳುವ ಮೇಕೆ ಕಳೆದುಕೊಂಡು ಮಹಿಳೆ ಕಂಗಾಲಾಗಿದ್ದಾರೆ.

ಗ್ರಾಮದ ಪಕ್ಕದಲ್ಲೇ ಚಿರತೆ ಪ್ರತ್ಯಕ್ಷದಿಂದ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಉಂಟಾಗಿದ್ದು, ಸೂಕ್ತ ಪರಿಹಾರಕ್ಕಾಗಿ ತಾಲ್ಲೂಕು ಆಡಳಿತಕ್ಕೆ ಮನವಿ ಮಾಡಲಾಗಿದೆ.

ಚಿರತೆ ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.