ಚಿತ್ರದುರ್ಗ: ಕಳೆದ 14 ತಿಂಗಳಿಂದ ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿದ್ದ ಮುರುಘಾ ಮಠದ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು ಇಂದು ಜೈಲಿನಿಂದ ಬಿಡುಗಡೆಗೊಂಡರು.
ಮೊದಲನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
ಈ ಸಂಬಂಧ ವಿಚಾರಣಾ ನ್ಯಾಯಾಲಯವಾದ ಚಿತ್ರದುರ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಇಬ್ಬರ ಶ್ಯೂರಿಟಿ ಮತ್ತಿತರೆ ಅಂಶಗಳನ್ನು ಪರಿಶೀಲಿಸಿ ಬುಧವಾರ ಮಧ್ಯಾಹ್ನ ಬಿಡುಗಡೆಗೆ ಆದೇಶ ಮಾಡಿತ್ತು.
ಆದರೆ, ಸಂಜೆ ನ್ಯಾಯಾಲಯದ ಆದೇಶ ಪ್ರತಿ ತಲುಪುವುದು ವಿಳಂಭವಾಗಿದ್ದ ಕಾರಣಕ್ಕೆ ಇಂದು ಬೆಳಗ್ಗೆ ಜಿಲ್ಲಾ ಕಾರಾಗೃಹದಲ್ಲಿ ಬಿಡುಗಡೆ ಪ್ರಕ್ರಿಯೆ ನಡೆಸಿ ಮಧ್ಯಾಹ್ನ 12.40ಕ್ಕೆ ಬಿಡುಗಡೆಯಾದರು.
ಜೈಲಿನಿಂದ ಹೊರಗೆ ಬಂದ ಮುರುಘಾ ಶರಣರನ್ನು ಭಕ್ತರು, ವಕೀಲರು ಸ್ವಾಗತಿಸಿದರು. ಇಲ್ಲಿಂದ ಶರಣರು ದಾವಣಗೆರೆ ವಿರಕ್ತಮಠದ ಕಡೆಗೆ ಪ್ರಯಾಣ ಬೆಳೆಸಿದರು.
ಒಂದನೇ ಪ್ರಕರಣರದಲ್ಲಿ ನವೆಂಬರ್ 8ರಂದು ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು. ಹೀಗಾಗಿ ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಇಂದು ಮುರುಘಾಶ್ರೀಗಳನ್ನು ಬಿಡುಗಡೆ ಮಾಡಲಾಗಿದೆ.
ಷರತ್ತು ವಿಧಿಸಿದ ಹೈಕೋರ್ಟ್
ಜೈಲಿನಿಂದ ಬಿಡುಗಡೆಗೊಂಡಿರುವ ಮುರುಘಾ ಶರಣರಿಗೆ ಕೋರ್ಟ್ ಕೆಲವು ಷರತ್ತು ವಿಧಿಸಿದ್ದು ಅದರಂತೆ ವಿಚಾರಣೆ ಮುಗಿಯುವವರೆಗೂ ಶ್ರೀಗಳು ಚಿತ್ರದುರ್ಗಕ್ಕೆ ಹೋಗುವಂತಿಲ್ಲ. ಇಬ್ಬರ ಶ್ಯೂರಿಟಿಯನ್ನು ಒದಗಿಸಬೇಕು. ವೀಡಿಯೊ ಕಾನ್ಫರೆನ್ಸ್ ಮೂಲಕ ಕೋರ್ಟ್ ವಿಚಾರಣೆಗೆ ಹಾಜರಾಗಬೇಕು. ಎರಡು ಲಕ್ಷ ರೂ. ಬಾಂಡ್ ಶ್ಯೂರಿಟಿ ನೀಡಬೇಕು. ಪಾಸ್ಪೋರ್ಟ್ ಅನ್ನು ಕೋರ್ಟ್ ವಶಕ್ಕೆ ನೀಡಬೇಕು. ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. ಇಂತಹ ಕೃತ್ಯ ಪುನರಾವರ್ತನೆಯಾಗಬಾರದು ಎಂದು ಷರತ್ತು ವಿಧಿಸಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.