ಕೋಲ್ಕತಾ: ಇಲ್ಲಿನ ಈಡನ್ ಗಾರ್ಡನ್ಸ್’ನಲ್ಲಿ ಗುರುವಾರ ನಡೆದ ವಿಶ್ವಕಪ್ 2ನೇ ಸೆಮಿ ಫೈನಲ್ ಪಂದ್ಯದಲ್ಲಿ 5 ಬಾರಿಯ ಚಾಂಪಿಯನ್ ಆಸ್ಟ್ರೇಲಿಯ ಅಮೋಘ ಜಯ ಸಾಧಿಸಿ ಫೈನಲ್ ಗೆ ಲಗ್ಗೆ ಇಟ್ಟಿದ್ದು, ಭಾನುವಾರ ಭಾರತದೊಂದಿಗೆ ದೊಡ್ಡ ಹಣಾಹಣಿ ನಡೆಸಲು ಸಿದ್ಧವಾಗಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ದಕ್ಷಿಣ ಆಫ್ರಿಕಾ ತಂಡ ಆಸ್ಟ್ರೇಲಿಯದ ಬಿಗಿ ದಾಳಿಗೆ ನಲುಗಿ ಭಾರೀ ಆಘಾತಕ್ಕೆ ಸಿಲುಕಿತಾದರೂ ಡೇವಿಡ್ ಮಿಲ್ಲರ್ ಅವರು ಶತಕದ ನೆರವಿನಿಂದ ಇನ್ನೂರರ ಗಡಿ ದಾಟಲು ಸಾಧ್ಯವಾಯಿತು. 213 ರನ್ ಗಳ ಸಾಧಾರಣ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯ 47.2 ಓವರ್ ಗಳಲ್ಲಿ ಗುರಿ ತಲುಪಿ(215) 3 ವಿಕೆಟ್ ಗಳ ಜಯಭೇರಿ ಬಾರಿಸಿ ಫೈನಲ್ ಗೆ ಲಗ್ಗೆ ಇಟ್ಟಿತು.
ಆಸೀಸ್ ಭರ್ಜರಿ ಆರಂಭ ಪಡೆಯಿತು. ಟ್ರಾವಿಸ್ ಹೆಡ್ 62 ರನ್( 48 ಎಸೆತ) ಗಳಿಸಿ ಔಟಾದರು. ಡೇವಿಡ್ ವಾರ್ನರ್ 29(18ಎಸೆತ) ಗಳಿಸಿ ಔಟಾದರು. 6.1 ಓವರ್ ಗಳಲ್ಲೇ 60 ರನ್ ಕಲೆ ಹಾಕಿ ಗೆಲುವಿನ ಸೂಚನೆ ನೀಡಿತು. ಆಬಳಿಕ ದಕ್ಷಿಣ ಆಫ್ರಿಕಾ ಬೌಲರ್ ಗಳು ಮೇಲುಗೈ ಸಾಧಿಸಿದರೂ ಗೆಲುವು ತನ್ನದಾಗಿಸಿಕೊಳ್ಳಲು ಸಾಧ್ಯವಾಗಲಿಲ್ಲ.
ಹೆಡ್ ಅವರನ್ನು ಮಹಾರಾಜ್, ವಾರ್ನರ್ ಅವರನ್ನು ಮಾರ್ಕ್ರಾಮ್ ಬೌಲ್ಡ್ ಮಾಡಿ ಸಂಭ್ರಮಿಸಿದರು. ಆ ಬಳಿಕ ಮಿಚೆಲ್ ಮಾರ್ಷ್ ಶೂನ್ಯಕ್ಕೆ ನಿರ್ಗಮಿಸಿದರು. 18 ರನ್ ಗಳಿಸಿದ್ದ ಮಾರ್ನಸ್ ಲಬುಶೆನ್ ಅವರನ್ನು ಶಮ್ಸಿ ಎಲ್ಬಿಡಬ್ಲ್ಯೂ ಬಲೆಗೆ ಕೆಡವಿದರು. ಬೆನ್ನಲ್ಲೇ ಗ್ಲೆನ್ ಮ್ಯಾಕ್ಸ್ವೆಲ್ ಅವರನ್ನು ಶಮ್ಸಿ ಕ್ಲೀನ್ ಬೌಲ್ಡ್ ಮಾಡಿ ಸಂಭ್ರಮದಲ್ಲಿ ತೇಲಾಡಿದರು.
ತಾಳ್ಮೆಯ ಆಟವಾಡಿದ ಸ್ಟೀವನ್ ಸ್ಮಿತ್ ಅವರು ದೊಡ್ಡ ಹೊಡೆತಕ್ಕೆ ಮುಂದಾಗಿ ಜೆರಾಲ್ಡ್ ಕೋಟ್ಜೀ ಎಸೆದ ಚೆಂಡನ್ನು ವಿಕೆಟ್ ಕೀಪರ್ ಡಿ ಕಾಕ್ ಕೈಗಿತ್ತು ನಿರ್ಗಮಿಸಿದರು. 62 ಎಸೆತಗಳಲ್ಲಿ 30 ರನ್ ಗಳಿಸಿ ನಿರ್ಗಮಿಸಿದರು.
49 ಎಸೆತಗಳಲ್ಲಿ 28 ರನ್ ಗಳಿಸಿದ್ದ ಜೋಶ್ ಇಂಗ್ಲಿಸ್ ಅವರನ್ನು ಕೋಟ್ಜೀ ಕ್ಲೀನ್ ಬೌಲ್ಡ್ ಮಾಡಿದರು. ಕೊನೆಯಲ್ಲಿ ಮಿಚೆಲ್ ಸ್ಟಾರ್ಕ್16 (38 ಎಸೆತ) ನಾಯಕ ಪ್ಯಾಟ್ ಕಮ್ಮಿನ್ಸ್ 14 ರನ್ (29ಎಸೆತ) ಗಳಿಸಿ ಔಟಾಗದೆ ಉಳಿದರು.
5 ನೇ ಬಾರಿ ಸೆಮಿ ಫೈನಲ್ ನಲ್ಲಿ ಎಡವಿದ ದಕ್ಷಿಣ ಆಫ್ರಿಕಾದ ವಿಶ್ವಕಪ್ ಕನಸು ನುಚ್ಚುನೂರಾಯಿತು. 1992 ರಲ್ಲಿ ಇಂಗ್ಲೆಂಡ್ ವಿರುದ್ಧ ಸಿಡ್ನಿ 19 ರನ್ ಸೋಲು,1999 ರಲ್ಲಿ ಆಸ್ಟ್ರೇಲಿಯ ವಿರುದ್ಧ ಬರ್ಮಿಂಗ್ ಹ್ಯಾಮ್ ನಲ್ಲಿ ಪಂದ್ಯ ಟೈ, 2007 ರಲ್ಲಿ ಆಸ್ಟ್ರೇಲಿಯ ವಿರುದ್ಧ ಗ್ರಾಸ್ ಐಲೆಟ್ 7 ವಿಕೆಟ್ ಸೋಲು, 2015ರಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಆಕ್ಲೆಂಡ್ ನಲ್ಲಿ 4 ವಿಕೆಟ್ ಸೋಲು ದಕ್ಷಿಣ ಆಫ್ರಿಕಾ ಅನುಭವಿಸಿದೆ.
1975 ಮತ್ತು 1996 ರಲ್ಲಿ ಫೈನಲ್ ನಲ್ಲಿ ಆಸ್ಟ್ರೇಲಿಯ ಸೋತು ರನ್ನರ್ ಅಪ್ ಆಗಿತ್ತು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.