ಮಂಡ್ಯ:ಜಾತ್ಯತೀತ ಜನತಾದಳದ ತಂಡವು ಮಂಡ್ಯ ವಿಧಾನಸಭಾ ಕ್ಷೇತ್ರದ ಬಸರಾಳು ಹೋಬಳಿಯ ಹನಗನಹಳ್ಳಿ ಹಾಗೂ ನಂದಹಳ್ಳಿ, ಮೇಲುಕೋಟೆ ವಿಧಾನಸಭಾ ಕ್ಷೇತ್ರದ ದುದ್ದ ಹೋಬಳಿಯ ಪುರದಕೊಪ್ಪಲು ಗ್ರಾಮಗಳಲ್ಲಿ ಬರ ಪರಿಸ್ಥಿತಿಯ ಅಧ್ಯಯನ ನಡೆಸಿತು.
ಹನಗನಹಳ್ಳಿಯ ರಾಮೇಗೌಡ ಅವರ ಜಮೀನಿಗೆ ಭೇಟಿ ನೀಡಿ ಟಮೋಟೋ ಬೆಳೆ,ನಂದಹಳ್ಳಿಯ ರೈತರ ಜಮೀನಿನಲ್ಲಿ ಬೆಳೆದಿರುವ ಜೋಳದ ಬೆಳೆ,ಪುರದಕೊಪ್ಪಲು ಶಂಕರೇಗೌಡ ಅವರ ಜಮೀನಿನಲ್ಲಿ ಬೆಳೆದಿರುವ ಬಾಳೆ ಬೆಳೆಗಳು ಹಾಳಾಗಿರುವುದನ್ನು ವೀಕ್ಷಿಸಿತು.
ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಮಾತನಾಡಿ,ಬರಗಾಲದ ಸಂಕಷ್ಟದ ಬಗ್ಗೆ ವಸ್ತು ಸ್ಥಿತಿ ಅಧ್ಯಯನ ನಡೆಸಿ ವರದಿ ಸಲ್ಲಿಸಲಾಗುವುದು,ಪಕ್ಷದ ಶಾಸಕಾಂಗ ನಾಯಕ ಎಚ್.ಡಿ. ಕುಮಾರಸ್ವಾಮಿ ಮತ್ತು ವರಿಷ್ಠರಾದ ಎಚ್.ಡಿ.ದೇವೇಗೌಡ ಬರ ಪರಿಸ್ಥಿತಿ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಗಮನ ಸೆಳೆದು ರೈತರ ಸಂಕಷ್ಟಕ್ಕೆ ಸ್ಪಂದಿಸಲಿದ್ದಾರೆ ಎಂದರು.
ಕೇಂದ್ರ ಪರಿಹಾರ ಕೊಟ್ಟಿಲ್ಲ ಎಂದು ಬೊಬ್ಬೆ ಹಾಕುತ್ತಿರುವ ರಾಜ್ಯ ಸರ್ಕಾರಕ್ಕೆ ಜವಾಬ್ದಾರಿ ಇದ್ದರೆ ಇಷ್ಟೊತ್ತಿಗೆ ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿತ್ತು,ಹವಾನಿಯಂತ್ರಿತ ಕೊಠಡಿಯಲ್ಲಿ ಸಿದ್ಧಪಡಿಸಿದ ವರದಿಯನ್ನು ತರಿಸಿಕೊಂಡಿದೆ.ಆದರೆ ವಾಸ್ತವ ಪರಿಸ್ಥಿತಿ ಬೇರೆ ಇದೆ, ರೈತರನ್ನು ಭೇಟಿಯಾದಾಗ ವಿದ್ಯುತ್ ಸಮಸ್ಯೆ,ಕೆರೆ ಕಟ್ಟೆಗಳಲ್ಲಿ ನೀರಿಲ್ಲದಿರುವುದು,ಬೆಳೆಗಳೆಲ್ಲ ಒಣಗಿರುವುದು, ಹೇಮಾವತಿ ನದಿ ಪಾತ್ರದಲ್ಲಿ ನೀರಿಲ್ಲದೆ ಬೆಳೆ ಹಾಕದಿರುವುದು ಕಂಡು ಬಂದಿದೆ ಎಂದರು.
ಅಧಿಕಾರಿಗಳ ತಂಡ ರೈತರನ್ನು ಖುದ್ದು ಭೇಟಿಯಾಗಿಲ್ಲ,ಜಮೀನುಗಳಲ್ಲಿನ ಪರಿಸ್ಥಿತಿ ನೋಡಿಲ್ಲ,ಒಣಗಿರುವ ಬೆಳೆಗಳನ್ನು ಕಂಡಿಲ್ಲ ಆದರೂ ಸಹ ವರದಿ ಸಿದ್ದಪಡಿಸಿ ಸರ್ಕಾರಕ್ಕೆ ಸಲ್ಲಿಸಿದ್ದಾರೆ,ಬರ ಪರಿಸ್ಥಿತಿ ಬಗ್ಗೆ ಚಳಿಗಾಲದ ಅಧಿವೇಶನದಲ್ಲಿ ಪಕ್ಷದ ಶಾಸಕರು ಧ್ವನಿ ಎತ್ತಲಿದ್ದಾರೆ ಎಂದರು.
ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಮಾತನಾಡಿ, ಬರ ಪರಿಹಾರ ನೀಡುವಲ್ಲಿ ರಾಜ್ಯ ಸರ್ಕಾರ ಮೊದಲು ತನ್ನ ಜವಾಬ್ದಾರಿ ನಿರ್ವಹಿಸಲಿ.ಕೇವಲ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡೋದಲ್ಲ.ಮೊದಲು ತಮ್ಮ ಪಾಲಿನ ಬರ ಪರಿಹಾರ ಕೊಡಲಿ.ಆ ಮೂಲಕ ಜವಾಬ್ದಾರಿಯುತ ಸರ್ಕಾರ ಅನ್ನೋದನ್ನ ಸಾಬೀತು ಮಾಡಲಿ ಎಂದು ತಿಳಿಸಿದರು.
ಶಾಸಕ ಎಚ್.ಟಿ.ಮಂಜು ಮಾತನಾಡಿ,ವಿದ್ಯುತ್ ಕಳ್ಳತನ ಮಾಡಿದ್ದಾರೆ ಎಂದು ಆರೋಪ ಮಾಡುವ ಕಾಂಗ್ರೆಸ್ ಪಕ್ಷಕ್ಕೆ ಎಚ್.ಡಿ.ಕುಮಾರಸ್ವಾಮಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ,ವಿಕೃತ ಮನಸ್ಸಿನ ಕಾಂಗ್ರೆಸ್ಸಿಗರು ರಾಜಕೀಯ ತೆವಲಿಗಾಗಿ ಮಾತನಾಡುತ್ತಿದ್ದು, ಇವರ ಕಳ್ಳತನ ಗೊತ್ತಿಲ್ಲವೇ, ಇಡೀ ಸರ್ಕಾರವೇ ಹಣದ ದಂಧೆಯಲ್ಲಿ ನಿರತವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮನ್ ಮುಲ್ ಮಾಜಿ ಅಧ್ಯಕ್ಷ ಬಿ.ಆರ್. ರಾಮಚಂದ್ರ, ಉಪಾಧ್ಯಕ್ಷ ಎಂ.ಎಸ್. ರಘುನಂದನ್, ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ಯುವ ಘಟಕದ ಜಿಲ್ಲಾಧ್ಯಕ್ಷ ಕೆ.ರವಿ, ಜೆಡಿಎಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಸಾತನೂರು ಜಯರಾಮ್, ಹಿಂದುಳಿದ ವರ್ಗ ವಿಭಾಗದ ರಾಜ್ಯಾಧ್ಯಕ್ಷ ಜಯರಾಮ್, ಕೆಂಚನಹಳ್ಳಿ ಪುಟ್ಟಸ್ವಾಮಿ ಮತ್ತಿತರ ಮುಖಂಡರು ಇದ್ದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.