ಬೆಂಗಳೂರು: ಜೆಡಿಎಸ್ ಪಕ್ಷದಿಂದ ಸಿಎಂ ಇಬ್ರಾಹಿಂ ಅವರನ್ನು ಅಮಾನತುಗೊಳಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್ಡಿ ದೇವೇಗೌಡ ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ರಾಜ್ಯ ಘಟಕದ ಪ್ರಸ್ತುತ ಕಾರ್ಯಕಾರಿ ಸಮಿತಿಯು ಪಕ್ಷದ ಸಂಘಟನೆ ಮತ್ತು ಬಲವರ್ಧನೆ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಿರುವುದಿಲ್ಲ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಕೈಗೊಂಡಿರುವುದಿಲ್ಲ. ಇದು ಮತ್ತು ಇನ್ನೂ ಕೆಲವು ಕಾರಣಗಳಿಗಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ಆದೇಶದಲ್ಲಿ ಅವರು ತಿಳಿಸಿದ್ದಾರೆ.
ಜೆಡಿಎಸ್ ಕರ್ನಾಟಕ ಘಟಕದ ಹಿಂದಿನ ಮಹಾ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನ ಪರಿಷತ್ ಶಾಸಕರಾದ ಎಸ್ ಎಲ್ ಬೋಜೇಗೌಡ ರವರು 19-10-2023ರಂದು ಸಲ್ಲಿಸಿರುವ ವರದಿಯಲ್ಲಿ ಕರ್ನಾಟಕ ರಾಜ್ಯ ಪರಿಷತ್ನ ಪ್ರಸ್ತುತ ಕಾರ್ಯಕಾರಿ ಸಮಿತಿ, ಪಕ್ಷದ ಸಂಘಟನೆ ಮತ್ತು ಬಲವರ್ಧನೆ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಿರುವುದಿಲ್ಲ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಕೈಗೊಂಡಿರುವುದಿಲ್ಲ ಎಂದು ತಿಳಿಸಿದ್ದಾರೆ. ಮುಂದುವರೆದು, ಪಕ್ಷದ ಕಾರ್ಯಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿಲ್ಲ. ರಾಜ್ಯಾಧ್ಯಕ್ಷರು ಒಳಗೊಂಡಂತೆ ರಾಜ್ಯ ಪರಿಷತ್ನ ಕಾರ್ಯಕಾರಿ ಸಮಿತಿ ನಿಷ್ಕ್ರಿಯವಾಗಿರುವುದಾಗಿಯೂ ಸಹ ತಿಳಿಸಿರುತ್ತಾರೆ.
ಅಲ್ಲದೆ ಪಕ್ಷದ ಹಿತದೃಷ್ಟಿಯಿಂದ ಮತ್ತು ಪಕ್ಷವನ್ನು ಸಂಘಟನೆ ಮಾಡಲು, ಬಲವರ್ಧಿಸಲು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಜತೆ ಮೈತ್ರಿ/ಹೊಂದಾಣಿಕೆ ಮಾಡಿಕೊಳ್ಳಬೇಕೆಂದು ಸರ್ವಾನುಮತದಿಂದ ತೀರ್ಮಾನಿಸಲಾಗಿದೆ. ಈ ಹೊಂದಾಣಿಕ ಬಗ್ಗೆ ಬಿಜೆಪಿ ಮುಖಂಡರೊಂದಿಗೆ ಚರ್ಚಿಸಲು ಪಕ್ಷದ ರಾಷ್ಟ್ರಾಧ್ಯಕ್ಷರು, ರಾಜ್ಯಾಧ್ಯಕ್ಷರು ಹಾಗೂ ಶಾಸಕಾಂಗ ಪಕ್ಷದ ನಾಯಕರಿಗೆ ಅಧಿಕಾರ ನೀಡಲು ತೀರ್ಮಾನಿಸಲಾಗಿದೆ. ಈ ವಿಚಾರವಾಗಿ ನಡೆದ ಸಭೆಗಳಲ್ಲಿ ಸಿಎಂ ಇಬ್ರಾಹಿಂ ಅವರು ಉಪಸ್ಥಿತರಿದ್ದು ಚರ್ಚೆಯಲ್ಲಿ ಮತ್ತು ತೀರ್ಮಾನದಲ್ಲಿ ಪಾಲುದಾರರಾಗಿದ್ದರು. ತದನಂತರ ಈ ತೀರ್ಮಾನದ ವಿರುದ್ಧ ವಿರೋಧಭಾಸ ಹೇಳಿಕೆ ನೀಡುತ್ತಿರುವುದಾಗಿ ವರದಿಯಾಗಿದೆ. ಈ ಕಾರಣಗಳಿಗಾಗಿ ರಾಜ್ಯಾಧ್ಯಕ್ಷರನ್ನೊಳಗೊಂಡ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಜೆಡಿಎಸ್ ಸಂವಿಧಾನದ ಸೆಕ್ಷನ್ 10ರ ಅನ್ವಯ ನವೆಂಬರ್ 19ರಿಂದ ಅನ್ವಯವಾಗುವಂತೆ ವಿಸರ್ಜನೆ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಆದೇಶದಲ್ಲಿ ದೇವೇಗೌಡರು ತಿಳಿಸಿದ್ದಾರೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.