ಮನೆ ರಾಜ್ಯ ಕೆಎಸ್ ಆರ್ ಟಿಸಿ ಬಸ್ ಇಂಜಿನ್ ನಲ್ಲಿ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು

ಕೆಎಸ್ ಆರ್ ಟಿಸಿ ಬಸ್ ಇಂಜಿನ್ ನಲ್ಲಿ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು

0

ಚಾಮರಾಜನಗರ: ಯಳಂದೂರಿನಿಂದ ಬಿಳಿಗಿರಿ ರಂಗನ ಬೆಟ್ಟಕ್ಕೆ ಹೊರಟಿದ್ದ ಕೆಎಸ್ ಆರ್ ಟಿಸಿ ಬಸ್ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದ ಅರಣ್ಯದ ರಸ್ತೆಯಲ್ಲಿ ನಡೆದಿದೆ..

ತಕ್ಷಣ ಎಚ್ಚೆತ್ತ ಚಾಲಕ, ಬಸ್ ನಿಲ್ಲಿಸಿದ್ದು, ಕೂಡಲೇ 50ಕ್ಕೂ ಹೆಚ್ಚು ಪ್ರಯಾಣಿಕರು ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾರೆ.

ಚಾಲಕ ಹಾಗೂ ನಿರ್ವಾಹಕ ಬಸ್ ​ನಲ್ಲಿದ್ದ ಪ್ರಯಾಣಿಕರ ಸಹಾಯದಿಂದ ಬೆಂಕಿ ನಂದಿಸಲು ಮುಂದಾಗಿದ್ದು, ಅಷ್ಟರಲ್ಲಿ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದಾರೆ.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೆ ಪ್ರಾಣ ಹಾನಿ ಆಗಿಲ್ಲ, ಈ ಕುರಿತು ಯಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.