ಮನೆ ರಾಜಕೀಯ ಸಿದ್ದರಾಮಯ್ಯರಿಗೆ ಬಹಿರಂಗ ಆಹ್ವಾನ ನೀಡಿದ ಸಚಿವ ವಿ.ಸೋಮಣ್ಣ

ಸಿದ್ದರಾಮಯ್ಯರಿಗೆ ಬಹಿರಂಗ ಆಹ್ವಾನ ನೀಡಿದ ಸಚಿವ ವಿ.ಸೋಮಣ್ಣ

0

ಮೈಸೂರು (Mysuru)-ವಸತಿ ಇಲಾಖೆಯಿಂದ ನಿರ್ಮಿಸಲಾಗಿರುವ ಮನೆ ನೋಡಲು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಅವರಿಗೆ ವಸತಿ ಸಚಿವ ವಿ.ಸೋಮಣ್ಣ (Somann) ಬಹಿರಂಗ ಆಹ್ವಾನ ನೀಡಿದ್ದಾರೆ.

ವಸತಿ ಇಲಾಖೆಯಿಂದ ಒಂದೇ ಒಂದು ಮನೆ ಆಗಿಲ್ಲ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಕ್ಕೆ ಪ್ರತಿಕ್ರಿಯಿಸಿದ ಸೋಮಣ್ಣ ಅವರು, ನಾನು ಎಷ್ಟು ಮನೆ ಕಟ್ಟಿದ್ದೇನೆ ಎಂಬುದನ್ನ ಇಡೀ ರಾಜ್ಯ ಸುತ್ತಿ ಸಿದ್ದರಾಮಯ್ಯನವರಿಗೆ ತೋರಿಸಲು ಸಿದ್ಧ ಎಂದಿದ್ದಾರೆ.

ನಾನು ಏನೇನು ಅಭಿವೃದ್ಧಿ ಮಾಡಿದ್ದೇನೆ ಎಂದು ಅವರಿಗೆ ತೋರಿಸುತ್ತೇನೆ. ನಾನು ಏನು ಮಾಡಿದ್ದೇನೆ ಎಂಬುದು ಜನರಿಗೆ ಗೊತ್ತಿದೆ. ಸಿದ್ದರಾಮಯ್ಯನವರು ಪದೇ ಪದೇ ಯಾಕೆ ಈ ಮಾತು ಹೇಳುತ್ತಿದ್ದಾರೆ ಅಂತಾ ಗೊತ್ತಿಲ್ಲ. ನಾನು ಸುಮ್ಮನೇ ಮೈ ಪರಚಿಕೊಳ್ಳುವ ವ್ಯಕ್ತಿಯಲ್ಲ ಎಂದಿದ್ದಾರೆ.

ರಾಜ್ಯ ಸರ್ಕಾರ ಸತ್ತು ಹೋಗಿದೆ ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿ ಆಗಿದ್ದವರು. ಬಹಳ ಜವಾಬ್ದಾರಿಯಿಂದ ಮಾತನಾಡುತ್ತಾರೆ ಎಂದುಕೊಂಡಿದ್ದೇವು ನಾವು. ಆದರೆ ಅವರ ಮಾತುಗಳಿಂದ ಅವರು ಎಂತಾ ಅನುಭವಸ್ಥರು ಎಂಬುದು ಗೊತ್ತಾಗುತ್ತಿದೆ. ಬೊಮ್ಮಯಿಯವರ ನೇತೃತ್ವದ ಸರ್ಕಾರ ತಪ್ಪು ಮಾಡಿದವರಿಗೆ ಶಿಕ್ಷೆ ನೀಡುತ್ತಾ, ಉತ್ತಮ ಆಡಳಿತ ನೀಡುತ್ತಿದೆ. ಎಲ್ಲಾ ಆರೋಪಗಳಿಗೂ ಕಾಲವೇ ಉತ್ತರ ನೀಡಲಿದೆ ಎಂದು ಹೇಳಿದರು.