ಚೆನ್ನೈ: ನಟ ಚಿಯಾನ್ ವಿಕ್ರಮ್ ಅವರ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ‘ಧ್ರುವ ನಚ್ಚತಿರಂ’ ಸಿನಿಮಾ ಅಂತೂ ರಿಲೀಸ್ ಹಂತಕ್ಕೆ ಬಂದು ನಿಂತಿದೆ. ಇದೇ ವಾರ ಸಿನಿಮಾ ತೆರೆಗೆ ಬರಲಿದೆ.
ಗೌತಮ್ ವಾಸುದೇವ್ ಮೆನನ್ ನಿರ್ದೇಶನದ ʼಧ್ರುವ ನಚ್ಚತಿರಂ’ ಅಂದುಕೊಂಡಂತೆ ಆಗಿದ್ದರೆ ಇಷ್ಟು ಹೊತ್ತಿಗೆ ರಿಲೀಸ್ ಆಗಿ 3-4 ನಾಲ್ಕು ವರ್ಷಗಳೇ ಕಳೆಯುತ್ತಿದ್ದವು. 2017 ರಲ್ಲಿ ಸಟ್ಟೇರಿದ ಸಿನಿಮಾಕ್ಕೆ ಕಾನೂನು ತೊಡಕು ಹಾಗೂ ಹಣಕಾಸಿನ ಸಮಸ್ಯೆ ಎದುರಾಗಿತ್ತು. ಅಂತೂ ಸಿನಿಮಾ ತೆರೆಗೆ ಬರಲು ಸಿದ್ದವಾಗಿದ್ದು, ವಿಕ್ರಮ್ ಅಭಿಮಾನಿಗಳು ತೆರೆ ಮೇಲೆ ಸ್ಪೈ ಆ್ಯಕ್ಷನ್ ಜರ್ನಿಯನ್ನು ನೋಡಲು ಕಾತರದಿಂದ ಕಾಯುತ್ತಿದ್ದಾರೆ.
ಇದೀಗ ಸಿನಿಮಾದ ಮೊದಲ ವಿಮರ್ಶೆ ಹೊರಬಿದ್ದಿದೆ. ಸಿನಿಮಾದ ಫೈನಲ್ ಕಟ್ ನ್ನು ವೀಕ್ಷಿಸಿರುವ ನಿರ್ದೇಶಕ ಲಿಂಗುಸಾಮಿ ವಿಕ್ರಮ್ ಚಿತ್ರದ ಬಗ್ಗೆ ಪಾಸಿಟಿವ್ ರಿವ್ಯೂ ನೀಡಿದ್ದಾರೆ.
“ಮುಂಬೈನಲ್ಲಿ ಮುಂಬೈನಲ್ಲಿ ʼಧ್ರುವ ನಚ್ಚತಿರಂ’ ಫೈನಲ್ ಕಟ್ ನೋಡಿದೆ. ಸಿನಿಮಾದ ದೃಶ್ಯವನ್ನು ಅದ್ಭುತವಾಗಿ ತೋರಿಸಲಾಗಿದೆ. ಸಿನಿಮಾ ಕೂಡ ಚೆನ್ನಾಗಿದೆ. ಚಿಯಾನ್ ವಿಕ್ರಮ್ ಕೂಲ್ ಆಗಿ ಕಾಣಿಸಿಕೊಂಡಿದ್ದಾರೆ. ವಿನಾಯಕನ್ ಇಡೀ ಸಿನಿಮಾದಲ್ಲಿ ಗಮನ ಸೆಳೆಯುತ್ತಾರೆ. ಸಿನಿಮಾದಲ್ಲಿ ದೊಡ್ಡ ಪಾತ್ರವರ್ಗವಿದ್ದು, ಎಲ್ಲರೂ ಅವರವರ ಪಾತ್ರವನ್ನು ಅಚ್ಚುಕಟ್ಟಾಗಿ ಮಾಡಿದ್ದಾರೆ. ಸಿನಿಮಾಕ್ಕೆ ಒಳ್ಳೆದಾಗಲಿ, ದೊಡ್ಡ ಹಿಟ್ ಆಗಲಿ” ಎಂದು ಚಿತ್ರತಂಡಕ್ಕೆ ಹಾರೈಸಿದ್ದಾರೆ.
ಗೌತಮ್ ವಾಸುದೇವ್ ಮೆನನ್ ಬರೆದುಮ ನಿರ್ದೇಶಿಸಿರುವ ‘ಧ್ರುವ ನಚ್ಚತಿರಂ’ ಸ್ಪೈ ಆಕ್ಷನ್ ಕಥಾಹಂದರವನ್ನು ಒಳಗೊಂಡಿದೆ. ಈ ಚಿತ್ರದಲ್ಲಿ ಚಿಯಾನ್ ವಿಕ್ರಮ್ ಪ್ರಮುಖ ಪಾತ್ರದಲ್ಲಿ ರಿತು ವರ್ಮಾ, ಆರ್ ಪಾರ್ತಿಬನ್, ರಾಧಿಕಾ ಶರತ್ಕುಮಾರ್, ಸಿಮ್ರಾನ್ ಮತ್ತು ವಿನಾಯಕನ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಇದೇ ನ.24 ರಂದು ಸಿನಿಮಾ ತೆರೆಗೆ ಬರಲಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.