ಮಂಡ್ಯ:ಜಾತಿ ಗಣತಿ ಮೂಲಕ ಸಮಾಜ ಒಡೆಯುವುದು ಕಾಂಗ್ರೆಸ್ನ ಉದ್ದೇಶವಾಗಿದೆ. ಅದರ ಪ್ರತಿಫಲವನ್ನು ಅವರು ಅನುಭವಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಜಾತಿಗಣತಿಗೆ ಸಂಬಂಧಿಸಿದಂತೆ ಸಿಎಂ ಟ್ವೀಟ್ ಗಮನಿಸಿದ್ದೇನೆ. ರಾಹುಲ್ ಗಾಂಧಿ ಭಾವನೆಗೆ ಸ್ಪಂದಿಸಿ ಜಾತಿಗಣತಿ ವರದಿ ಪಡೆಯುವ ನಿರ್ಧಾರ ಮಾಡಿದ್ದಾರೆ. ಕಾಂತರಾಜು ವರದಿಯ ಮೂಲಪ್ರತಿ ಕಳ್ಳತನವಾದ ಮಾಹಿತಿ ಇದೆ. ಅಂತೆಯೇ ಆ ವರದಿಯನ್ನು ಕುಮಾರಸ್ವಾಮಿ ತಿರಸ್ಕಾರ ಮಾಡಿದ್ದರೆಂದು ಆರೋಪಿಸಿದ್ದಾರೆ. ಹಾಗಿದ್ದರೆ, ಇವರು ಅಧಿಕಾರಕ್ಕೆ ಬಂದ ಈ ಆರು ತಿಂಗಳಲ್ಲಿ ಏಕೆ ವರದಿಗೆ ಒಪ್ಪಿಗೆ ಕೊಡಲಿಲ್ಲ? ಎಂದು ಪ್ರಶ್ನಿಸಿದರು.
ಸಂಪೂರ್ಣ ಜನಗಣತಿ ಆಗಿಲ್ಲ, ಮನೆಗಳಿಗೆ ಭೇಟಿ ಕೊಟ್ಟಿಲ್ಲ. ಅವರಿಗೆ ಬೇಕಾದಂತೆ ವರದಿ ಸಿದ್ಧವಾಗಿರುವುದು ಜಗಜ್ಜಾಹೀರು. ರಾಷ್ಟ್ರೀಯ ನಾಯಕರನ್ನು ಮೆಚ್ಚಿಸಲು ಈಗ ವರದಿ ತೆಗೆದುಕೊಳ್ಳುವ ನಿರ್ಧಾರ ಮಾಡಿದ್ದಾರೆ ಎಂದು ಟೀಕಾಪ್ರಹಾರ ಮಾಡಿದರು.
ಕಾಂತರಾಜು ಕಮಿಟಿ ರಚನೆ ಮಾಡಿ 10 ವರ್ಷಗಳು ಕಳೆದಿವೆ. ಈ ಅವಧಿಯಲ್ಲಿ ಹಲವಾರು ಬೆಳವಣಿಗೆಗಳು ಆಗಿವೆ. ಮನೆಯಲ್ಲಿ ಕುಳಿತು ಬರೆದರೋ, ಇಲ್ಲವೋ ಆಗಿನ ಸಿಎಂ ಬರೆಸಿದ್ದಾರೋ ಗೊತ್ತಿಲ್ಲ. ಆದರೆ, ಅವತ್ತಿನ ಮೆಂಬರ್ ಸೆಕ್ರೆಟರಿ ವರದಿಗೆ ಸಹಿ ಹಾಕದಿರಲು ಕಾರಣವೇನು? ಎಂದು ಪ್ರಶ್ನಿಸಿದರು.
ಸಮಾಜವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಇವರಿಗೆ ಬೇಕಿಲ್ಲ. ಜಾತಿಯ ಹೆಸರಿನಿಂದ ನಾನು ವಿರೋಧ ವ್ಯಕ್ತಪಡಿಸಲ್ಲ. ಸುಳ್ಳು ನಮ್ಮ ಮನದೇವರೆಂದು ಆರೋಪಿಸುತ್ತಾರೆ. ಪಾಪ ಇವರು ಸತ್ಯಹರಿಶ್ಚಂದ್ರ ವಂಶದವರು ಅಲ್ವಾ? ಕಳೆದ ಚುನಾವಣೆಯಲ್ಲಿ ಪೇಪರ್, ಪೆನ್ ಕೇಳಿದವರು ಇಂದು ಚರ್ಚೆ ಮಾಡಬೇಕು. ಇವರಿಗೆ ಅಧಿಕಾರ ಇದೆ, ಕ್ಯಾಬಿನೆಟ್ನಲ್ಲಿ ಸತ್ಯಾಂಶ ಚರ್ಚೆ ಮಾಡಿ ಸಮಸ್ಯೆ ಬಗೆಹರಿಸಬೇಕು ಎಂದು ಸವಾಲು ಹಾಕಿದರು.
ಬಿಜೆಪಿಗರು ಹೇಳಿದರೆ ಕುಮಾರಸ್ವಾಮಿ ಚಡ್ಡಿಯನ್ನು ಬೇಕಾದರೂ ಹಾಕುತ್ತಾರೆ, ದತ್ತಮಾಲೆಯನ್ನು ಹಾಕುತ್ತಾರೆನ್ನುವ ಸಚಿವ ಎನ್.ಚಲುವರಾಯಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಹೇಳಿದರೆ ಚಲುವರಾಯಸ್ವಾಮಿ ಏನು ಹಾಕುತ್ತಾರೆಂದು ಹೇಳಲಿ. ನಂತರ ನನ್ನ ಬಗ್ಗೆ ಮಾತನಾಡಲಿ ಎಂದು ತಿರುಗೇಟು ನೀಡಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.