ಮೈಸೂರು: ಲಂಚ ಸ್ವೀಕರಿಸುತ್ತಿದ್ದಾಗ ಮಹಿಳಾ ಎಎಸ್ ಐ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಕೀಲಾವತಿ ಲೋಕಾಯುಕ್ತ ಅಧಿಕಾರಿಗಳಿಂದ ಬಂಧನಕ್ಕೊಳಗಾದ ಹೆಚ್.ಡಿ.ಕೋಟೆ ಪೊಲೀಸ್ ಠಾಣೆ ಎಎಸ್ಐ.
ಕೆಂಡಗಣ್ಣ ನಾಯ್ಕ ಎಂಬುವರು ನಾಗೇಂದ್ರಗೆ 1.25 ಲಕ್ಷ ಸಾಲ ನೀಡಿದ್ದರು. ಈ ಮೊತ್ತದಲ್ಲಿ ನಾಗೇಂದ್ರ ಅವರು 25 ಸಾವಿರ ರೂಪಾಯಿ ವಾಪಸ್ ನೀಡಿದ್ದು, 1 ಲಕ್ಷ ರೂ. ಬಾಕಿ ಇರಿಸಿಕೊಂಡು ಕೆಂಡಗಣ್ಣ ಅವರಿಗೆ ಸತಾಯಿಸುತ್ತಿದ್ದನು. ಈ ಬಗ್ಗೆ ಕೆಂಡಗಣ್ಣ ಅವರು ಹೆಚ್ ಡಿ ಕೋಟೆ ಠಾಣೆಗೆ ದೂರು ನೀಡಿದ್ದರು.
ಆದರೆ, ಸಾಲದ ಹಣ ವಾಪಸ್ ಕೊಡಿಸುವುದಕ್ಕೆ ಎಎಸ್ ಐ ಶಕೀಲಾವತಿ ಅವರು ಮೂರು ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಕೆಂಡಗಣ್ಣ ಅವರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ಅದರಂತೆ ನಡೆದ ಟ್ರಾಪ್ ನಲ್ಲಿ ಕೆಂಡಗಣ್ಣ ಅವರಿಂದ ಲಂಚದ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.