ಹಾಸನ: ನಿತ್ಯ ಕುರಿ ಮೇಯಿಸಲು ಊರಾಚೆ ತೆರಳುತ್ತಿದ್ದ ಮಹಿಳೆಯನ್ನು ಆಪರಿಚಿತರು ಕೊಲೆಗೈದು ಆಕೆಯ ಮೈಮೇಲಿದ್ದ ಒಡವೆಗಳನ್ನು ಕಿತ್ತುಕೊಂಡು ಶವ ಹಳ್ಳಕ್ಕೆ ಬಿಸಾಡಿ ಪರಾರಿಯಾಗಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಅಡಗೂರು ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ಮಹಿಳೆಯನ್ನು ಸುಶೀಲಮ್ಮ (60) ಎಂದು ಗುರುತಿಸಲಾಗಿದೆ.
ಇವರು ಜೀವನೋಪಾಯಕ್ಕಾಗಿ ಕುರಿ, ಮೇಕೆಗಳನ್ನು ಸಾಕಿಕೊಂಡಿದ್ದರು. ಹತ್ತಾರು ಆಡು, ಕುರಿಗಳನ್ನು ಹೊಂದಿದ್ದ ಸುಶೀಲಮ್ಮ, ಅವುಗಳ ಸಂತಾನೋತ್ಪತ್ತಿಯಿಂದ ಬಂದ ಮರಿಗಳನ್ನು ಸಾಕಿ ಪ್ರತಿ ವರ್ಷ 50 ಸಾವಿರ ರೂ.ಗೂ ಹೆಚ್ಚಿನ ಕುರಿಗಳನ್ನು ಮಾರಾಟ ಮಾಡುತ್ತಿದ್ದರು. ಓರ್ವ ಮಗ ಇದ್ದು, ಆತನೊಂದಿಗಿರದೆ ದಂಪತಿ ಬೇರೆ ವಾಸವಾಗಿದ್ದರು.ಕುರಿ, ಮೇಕೆ ಮಾರಾಟ ಮಾಡಿ ಬಂದ ಹಣದಿಂದ ಚಿನ್ನದ ಒಡವೆ ಖರೀದಿಸಿ ಧರಿಸಿದ್ದರು. ಸದ್ಯಕ್ಕೆ ವಾಸವಿದ್ದ ಮನೆಯಲ್ಲಿ ಸೂಕ್ತ ಭದ್ರತೆ ಇಲ್ಲದ ಕಾರಣ ಪ್ರತಿದಿನ ಒಡವೆ ಧರಿಸಿಯೇ ಕುರಿ ಮೇಯಿಸಲು ತೆರಳುತ್ತಿದ್ದರು.
ಈಕೆಯನ್ನು ನಿತ್ಯ ಗಮನಿಸಿದ ಯಾರೋ ಕಿಡಿಗೇಡಿಗಳು ಮೈಮೇಲಿದ್ದ ಒಡವೆ ಆಸೆಗೆ ಮಹಿಳೆಯನ್ನು ಅಡಗೂರು ಗ್ರಾಮದ ಹೊರವಲಯದಲ್ಲಿ ಕೊಲೆ ಮಾಡಿರುವುದಾಗಿ ಗ್ರಾಮಸ್ಥರು ಸಂಶಯ ವ್ಯಕ್ತಪಡಿಸಿದ್ದಾರೆ.
ಮೇಯಲು ಹೋದ ಕುರಿಗಳು ಮನೆಯ ಹಟ್ಟಿ ತಲುಪಿದರೂ ಸುಶೀಲಮ್ಮ ಬಾರದಿದ್ದಾಗ ಕುಟುಂಬಸ್ಥರು ಎಲ್ಲಾ ಕಡೆ ಹುಡುಕಾಟ ನಡೆಸಿದ್ದಾರೆ. ಎಲ್ಲೂ ಪತ್ತೆಯಾಗದ ಹಿನ್ನೆಲೆಯಲ್ಲಿ ಕಾಣೆಯಾಗಿರುವ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮಂಗಳವಾರ ಬೆಳಿಗ್ಗೆ ಅಡಗೂರು ಗ್ರಾಮದ ಹೊರ ವಲಯದಲ್ಲಿರುವ ನೀರಿನ ಹಳ್ಳದಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಸುಶೀಲಮ್ಮನ ಮೈಮೇಲೆ ಯಾವುದೇ ಒಡವೆಗಳು ಇಲ್ಲದ ಕಾರಣ ಒಡವೆ ಸಲುವಾಗಿ ಕೊಲೆ ನಡೆದಿರುವ ಶಂಕೆ ಮೂಡಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.