ಹಾವು ಕಚ್ಚಿಸಿ ಪತ್ನಿ ಹಾಗೂ ಮಗಳನ್ನು ಕೊಲೆ ಮಾಡಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಘಟನೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆದಿದೆ.
ಆರೋಪಿಯನ್ನು ಕೆ ಗಣೇಶ್ ಪಾತ್ರ ಎಂದು ಗುರುತಿಸಲಾಗಿದ್ದು, ತನ್ನ ಹೆಂಡತಿಯೊಂದಿಗೆ ಕೌಟುಂಬಿಕ ಕಲಹವನ್ನು ಹೊಂದಿದ್ದು, ಅವಳನ್ನು ಮತ್ತು ಅವರ ಎರಡು ವರ್ಷದ ಮಗಳನ್ನು ಕೊಲ್ಲಲು ಯೋಜನೆ ರೂಪಿಸಿದ್ದ.
ಹಾವಾಡಿಗರ ಬಳಿ ನಾಗರಹಾವನ್ನು ಖರೀದಿಸಿ ಅಕ್ಟೋಬರ್ 7 ರಂದು ತನ್ನ ಹೆಂಡತಿ ಮತ್ತು ಅಪ್ರಾಪ್ತ ಮಗಳ ಕೋಣೆಗೆ ಬಿಟ್ಟಿದ್ದ. ನಂತರ ಹಾವು ತಾಯಿ-ಮಗಳನ್ನು ಕಚ್ಚಿತ್ತು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ವೈದ್ಯರು ವೈದ್ಯಕೀಯ ಪರೀಕ್ಷೆಯ ನಂತರ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಹಾವು ಕಡಿತದಿಂದ ಸಾವನ್ನಪ್ಪಿದ್ದರೂ ಕೂಡ ಇದು ಅಸ್ವಾಭಾವಿಕ ಸಾವೆಂದು ಪೊಲೀಸರು ಪರಿಗಣಿಸಿ ಪ್ರಕರಣ ದಾಖಲಿಸಿದ್ದರು. ಬಳಿಕ ತನಿಖೆಯ ಹಾದಿಯೇ ಬದಲಾಗಿತ್ತು.
ಅಂದು ರಾತ್ರಿ ಕುಟುಂಬ ಸದಸ್ಯರು ಇಬ್ಬರನ್ನು ಕೊಂದು ಆಸ್ಪತ್ರೆಗೆ ಸಾಗಿಸಿದ್ದರು. ಮರಣೋತ್ತರ ಪರೀಕ್ಷೆಯ ವರದಿಯು ಹಾವು ಕಡಿತದಿಂದ ಸಾವನ್ನಪ್ಪಿದ್ದಾರೆ ಎಂದೇ ಬಂದಿದೆ.
ಮೃತ ಮಹಿಳೆಯ ತಂದೆಯ ಆರೋಪದ ಆಧಾರದ ಮೇಲೆ ನಾವು ನಮ್ಮ ತನಿಖೆಯನ್ನು ಪ್ರಾರಂಭಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಹಾವಾಡಿಗನನ್ನು ವಿಚಾರಣೆ ನಡೆಸುತ್ತೇವೆ ಎಂದಿದ್ದಾರೆ.
ಪ್ರಕರಣದ ವಿವರವಾದ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.