ಟೆಲ್ ಅವೀವ್: ಇಸ್ರೇಲ್-ಹಮಾಸ್ ನಡುವೆ ನಾಲ್ಕು ದಿನಗಳ ಕದನ ವಿರಾಮ ಶುಕ್ರವಾರದಿಂದ ಆರಂಭಗೊಂಡಿದ್ದು, ಮೊದಲ ಬ್ಯಾಚ್ ನಲ್ಲಿ 13 ಒತ್ತೆಯಾಳು ಸೇರಿದಂತೆ ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಕತಾರ್ ಘೋಷಿಸಿದೆ.
ಕತಾರ್’ನ ವಿದೇಶಾಂಗ ಸಚಿವಾಲಯದ ವಕ್ತಾರ ಮಜೀದ್ ಅಲ್-ಅನ್ಸಾರಿ ಮಾತನಾಡಿ, ಇಂದು ಬೆಳಿಗ್ಗೆ 7 ಗಂಟೆಯಿಂದ ಕದನ ವಿರಾಮವು ಪ್ರಾರಂಭವಾಗಿದ್ದು, ಮಹಿಳೆ ಮತ್ತು ಮಕ್ಕಳು ಸೇರಿದಂತೆ 13 ಮಂದಿ ಒತ್ತೆಯಾಳುಗಳನ್ನು ಸಂಜೆ 4 ಗಂಟೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಬಿಡುಗಡೆ ಮಾಡಲು ನಿರ್ಧರಿಸಲಾದ ಪ್ಯಾಲೆಸ್ಟೀನ್ ಕೈದಿಗಳ ಪಟ್ಟಿಯನ್ನು ಇಸ್ರೇಲ್ ಗುಪ್ತಚರ ಇಲಾಖೆ ಬಿಡುಗಡೆ ಮಾಡಿರುವುದಾಗಿ ತಿಳಿಸಿದ್ದಾರೆ.
ಇಸ್ರೇಲ್’ನ ರಾಷ್ಟ್ರೀಯ ಭದ್ರತಾ ಸಲಹೆಗಾರ ಟ್ಜಾಚಿ ಹನೆಗ್ಬಿ ಮಾತನಾಡಿ, ನಿರೀಕ್ಷೆಯಂತೆ ಪ್ರಕ್ರಿಯೆ ಗುರುವಾರ ಆರಂಭವಾಗಬೇಕಿತ್ತು. ಒತ್ತೆಯಾಳುಗಳ ಬಿಡುಗಡೆಗಾಗಿ ಬಂಡುಕೋರರ ಜೊತೆಗೆ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದ್ದಾರೆ.
ಹಂತ, ಹಂತವಾಗಿ ಹಮಾಸ್ ಬಂಡುಕೋರರಿಂದ 50 ಒತ್ತೆಯಾಳುಗಳ ಬಿಡುಗಡೆ ಹಾಗೂ ಪ್ರತಿಯಾಗಿ ಇಸ್ರೇಲ್ ನಿಂದ 150 ಪ್ಯಾಲೆಸ್ಟೀನ್ ಕೈದಿಗಳ ಬಿಡುಗಡೆ ಕುರಿತಂತೆ ಒಪ್ಪಂದ ಆಗಿತ್ತು. ‘ಮೂಲ ಒಪ್ಪಂದದಂತೇ ನಿಗದಿತ ಸ್ಥಳದಲ್ಲೇ ಬಿಡುಗಡೆ ಕಾರ್ಯ ನಡೆಯಲಿದೆ’ ಎಂದು ತಿಳಿಸಿದ್ದಾರೆ.
ವಿಳಂಬವು ಒತ್ತೆಯಾಳುಗಳ ಕುಟುಂಬ ಸದಸ್ಯರಲ್ಲಿ ಹಾಗೂ ಕದನ ವಿರಾಮದ ನಿರೀಕ್ಷೆಯಲ್ಲಿದ್ದ, 47 ದಿನಗಳಿಂದ ಭೀತಿಯಲ್ಲಿಯೇ ದಿನದೂಡುತ್ತಿರುವ ಗಾಜಾದ ಅಸಂಖ್ಯಾತ ನಿವಾಸಿಗಳಲ್ಲೂ ಆತಂಕವನ್ನು ಹೆಚ್ಚಿಸಿದೆ. ಕದನ ನಿರತ ಹಮಾಸ್ ಬಂಡುಕೋರರು ಹಾಗೂ ಇಸ್ರೇಲ್ ಸೇನೆಯ ನಡುವೆ ಒತ್ತೆಯಾಳುಗಳ ಬಿಡುಗಡೆಗಾಗಿ ಒಡಂಬಡಿಕೆ ಮೂಡಿತ್ತು. ಇಸ್ರೇಲ್, ಅಮೆರಿಕ, ಕತಾರ್ ಇದಕ್ಕಾಗಿ ಮಧ್ಯಸ್ಥಿಕೆಯನ್ನು ವಹಿಸಿದ್ದವು.
ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ನಡೆಸಿದ ಮಾರಕ ದಾಳಿಗಳಲ್ಲಿ ಹಮಾಸ್ ಉಗ್ರ ಸಂಘಟನೆ ಇಸ್ರೇಲನ್ನು ಕೆಣಕಿತ್ತು. 250ಕ್ಕೂ ಅಧಿಕ ಇಸ್ರೇಲಿ ನಾಗರಿಕರನ್ನು ಒತ್ತೆಯಾಳುಗಳನ್ನಾಗಿ ಒಯ್ದಿತ್ತು. ಪ್ರತಿಯಾಗಿ ಗಾಜಾದಲ್ಲಿ ಹಮಾಸ್ ಇರುವ ಕೇಂದ್ರಗಳ ಮೇಲೆ ಬಾಂಬ್ ದಾಳಿಗಳನ್ನು ಇಸ್ರೇಲ್ ನಡೆಸಿದೆ. 11,000ಕ್ಕೂ ಅಧಿಕ ಮಂದಿ ಈ ದಾಳಿಗಳಲ್ಲಿ ಮೃತಪಟ್ಟಿದ್ದಾರೆ. ಹಮಾಸ್ನ ಹಲವು ಉಗ್ರ ನಾಯಕರನ್ನು ಕೊಂದಿರುವುದಾಗಿ ಇಸ್ರೇಲ್ ಸೇನೆ ಹೇಳಿಕೊಂಡಿದೆ. ಗಾಜಾದ ಹಲವು ಆಸ್ಪತ್ರೆಗಳ ಮೇಲೆ ರಾಕೆಟ್ ದಾಳಿ ನಡೆದಿದ್ದು, ಅಲ್ಲಿ ಹಮಾಸ್ ಉಗ್ರರು ಬಳಸುವ ಸುರಂಗಗಳು ಪತ್ತೆಯಾಗಿವೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.