ಮನೆ ರಾಜಕೀಯ ಕಾಂಗ್ರೆಸ್ ಗೆ ಅಭ್ಯರ್ಥಿಗಳ ಕೊರತೆ: ಸಚಿವ ಸುನೀಲ್ ಕುಮಾರ್

ಕಾಂಗ್ರೆಸ್ ಗೆ ಅಭ್ಯರ್ಥಿಗಳ ಕೊರತೆ: ಸಚಿವ ಸುನೀಲ್ ಕುಮಾರ್

0

ಉಡುಪಿ(Udupi): ಕಾಂಗ್ರೆಸ್ ನಲ್ಲಿ ಅಭ್ಯರ್ಥಿಗಳ ಕೊರತೆ ಇದೆ. ಕಾಂಗ್ರೆಸ್ ಅನ್ನ ಆ ಭಗವಂತನೇ ಕಾಪಾಡಬೇಕು. 20 ಕ್ಷೇತ್ರದಲ್ಲಿ ಒಬ್ಬನೇ ಅಭ್ಯರ್ಥಿ ನಿಲ್ಲುವ ಪರಿಸ್ಥಿತಿ ಕಾಂಗ್ರೆಸ್ ‍ಗೆ ಬಂದಿದೆ ಸಚಿವ ಸುನೀಲ್ ಕುಮಾರ್ ವ್ಯಂಗ್ಯವಾಡಿದ್ದಾರೆ.

 ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 20 ಕ್ಷೇತ್ರಗಳಿಂದ ಸ್ಪರ್ಧಿಸಲು ವಿಪಕ್ಷ ನಾಯಕ ಸಿದ್ಧರಾಮಯ್ಯಗೆ ಆಹ್ವಾನ ವಿಚಾರಕ್ಕೆ ಸಂಬಂಧಿಸಿಂತೆ  ಮಾಧ್ಯಮಗಳ ಜತೆ ಮಾತನಾಡಿದ ಅವರು, ಸಿದ್ಧರಾಮಯ್ಯ ಕಳೆದ ಬಾರಿ 2 ಕಡೆ ಚುನಾವಣೆಯಲ್ಲಿ ಸ್ಪರ್ಧಿಸಿ ಒಂದು ಕಡೆ ಕಷ್ಟದಿಂದ ಗೆದ್ದರು. ಈ ಬಾರಿ 20 ಕಡೆ ನಿಲ್ಲಲು ಯಾರು ಹೇಳ್ತಾರೋ ಗೊತ್ತಿಲ್ಲ ಎಂದು ಕಾಂಗ್ರೆಸ್ ನಾಯಕರ ಕಾಲೆಳೆದರು.

ಕನ್ನಡಿಗರ ಮೇಲೆ ಹಿಂದಿ ಹೇರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸುನೀಲ್ ಕುಮಾರ್, ಹಿಂದಿ ಹೇರಿಕೆ ಪ್ರಶ್ನೆಯೇ ಬರಲ್ಲ. ನಮ್ಮ ಮಾತೃಭಾಷೆ ಕನ್ನಡ. ಕನ್ನಡ ಬಿಟ್ಟು ಬೇರೆ ಮಾತಾಡಿ ಎಂದಿಲ್ಲ. ಕರ್ನಾಟಕದಲ್ಲಿ ಕನ್ನಡಕ್ಕೆ ಪ್ರಾಮುಖ್ಯತೆ ಇದೆ ಎಂದರು.