ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಜನತಾ ದರ್ಶನ ಕಾರ್ಯಕ್ರಮದ ಮೂಲಕ ಇಡೀ ದಿನ ಜನರ ಸಮಸ್ಯೆ ಮತ್ತು ಸಂಕಷ್ಟಗಳಿಗೆ ಕಿವಿಗೊಡುತ್ತಿದ್ದಾರೆ. ನಾಡಿನ ಪ್ರಜೆಗಳ ಅಹವಾಲು ಸ್ವೀಕರಿಸುತ್ತಿದ್ದಾರೆ.
ಸದ್ಯ ಈ ವಿಚಾರವಾಗಿ ಸಾಲು ಸಾಲು ಪ್ರಶ್ನೆಗಳನ್ನು ಕೇಳುವ ಮೂಲಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.
ಕನ್ನಡಿಗರ ಕಿವಿ ಮೇಲೆ ಹೂವಿಟ್ಟು ಛೀ ಥೂ ಎನಿಸಿಕೊಳ್ಳುತ್ತಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜನತಾ ದರ್ಶನದಲ್ಲಿ ಎದುರಾಗುವ ಪ್ರಶ್ನೆಗಳು:
ಮೋದಿ ಸರ್ಕಾರದ 5 ಕೆಜಿ ಅಕ್ಕಿ ನೀವು ಕೊಡುತ್ತಿಲ್ಲ ಏಕೆ?
ನೀವೇ ಹೇಳಿದ ಹತ್ತು ಕೆಜಿ ಅಕ್ಕಿ ಕೊಟ್ಟಿಲ್ಲ ಏಕೆ?
ಗೃಹ ಲಕ್ಷ್ಮಿ ಹೆಸರಲ್ಲಿ ಸ್ವಾಭಿಮಾನಿ ಮಹಿಳೆಯರನ್ನು ವಂಚಿಸಿದ್ದು ಏಕೆ?
ಕನ್ನಡಿಗರ ಹಣವನ್ನು ಲೂಟಿ ಮಾಡಿ ಹೈಕಮಾಂಡ್ ಹೊಟ್ಟೆ ತುಂಬಿಸುತ್ತಿರುವುದು ಸರಿಯೇ
ಬರಗಾಲವನ್ನು ನಿರ್ವಹಣೆ ಮಾಡಲಿಲ್ಲ, ಪರಿಹಾರವೂ ಕೊಟ್ಟಿಲ್ಲ ಏಕೆ?
ನಾಡಿನ ಜನತೆ ಸಂಕಷ್ಟದಲ್ಲಿರುವಾಗ ನಿಮಗೆ ಪಂಚ ರಾಜ್ಯ ಚುನಾವಣೆ ಮುಖ್ಯವೇ?
ನಮ್ಮನ್ನು ಉದ್ಧಾರ ಮಾಡುತ್ತೇವೆಂದು ಬಂದು ಬೆಲೆ ಏರಿಕೆ ಮೂಲಕ ತುಳಿದಿದ್ದು ಸರಿಯೇ?
ಕಾವೇರಿಯನ್ನು ಕಳ್ಳತನದಿಂದ ಬಿಟ್ಟು ನಮಗೆ ವಂಚಿಸಿದ್ದೇಕೆ?
ತೆಲಂಗಾಣ ಚುನಾವಣೆ ಹಣವನ್ನು ಮಂಚದ ಕೆಳಗೆ ಬಚ್ಚಿಟ್ಟಿದ್ದು ಅಲ್ಲದೆ ಮೋಜು ಮಾಡಲು ಸರ್ಕಾರ ಅಲ್ಲಿಗೆ ಟೂರ್ ಹೋಗಿದ್ದೇಕೆ?
ಸ್ವಯಂಘೋಷಿತ ಆರ್ಥಿಕ ತಜ್ಞ ಮಜವಾದಿ ಸಿದ್ದರಾಮಯ್ಯ ಅವರ ಬಳಿ ಜನರ ಈ ಪ್ರಶ್ನೆಗಳಿಗೆ ಒಂದಕ್ಕಾದರೂ ಉತ್ತರವಿದೆಯೇ? ಎಂದು ಸಾಲು ಸಾಲು ಪ್ರಶ್ನೆಗಳನ್ನು ಬಿಜೆಪಿ ಮಾಡಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.