ನವದೆಹಲಿ: 17 ದಿನಗಳ ಕಾಲ ನಡೆದ ಮ್ಯಾರಥಾನ್ ರಕ್ಷಣಾ ಕಾರ್ಯಾಚರಣೆಯ ನಂತರ ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಿಂದ ಸುರಕ್ಷಿತವಾಗಿ ಹೊರಬಂದ ಕಾರ್ಮಿಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ತಡರಾತ್ರಿ ದೂರವಾಣಿ ಮೂಲಕ ಮಾತನಾಡಿ ಅರೋಗ್ಯ ವಿಚಾರಿಸಿದ್ದಾರೆ.
ಸುಮಾರು ಹದಿನೇಳು ದಿನಗಳ ನಿರಂತರ ಕಾರ್ಯಾಚರಣೆಯ ಭಾಗವಾಗಿ ಎಲ್ಲಾ ನಲ್ವತ್ತೊಂದು ಕಾರ್ಮಿಕರನ್ನು ಮಂಗಳವಾರ ಸಂಜೆ ಸುರಕ್ಷಿತವಾಗಿ ಹೊರತರಲಾಯಿತು.
ರಕ್ಷಣಾ ಕಾರ್ಯ ಯಶಸ್ವಿಯಾದ ಕೂಡಲೇ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ”ನಿಮ್ಮ ಧೈರ್ಯ ಹಾಗೂ ತಾಳ್ಮೆ ಎಲ್ಲರಿಗೂ ಸ್ಫೂರ್ತಿ, ನೀವೆಲ್ಲರೂ ದೀರ್ಘಕಾಲ ಆರೋಗ್ಯವಾಗಿರಿ. ದೀರ್ಘಾವಧಿಯ ಕಾಯುವಿಕೆಯ ಬಳಿಕ ನೀವು ನಿಮ್ಮ ಪ್ರೀತಿ ಪಾತ್ರರನ್ನು ಭೇಟಿಯಾಗಿರುವುದು ತುಂಬಾ ಸಂತಸದ ಸಂಗತಿ” ಎಂದು ಬರೆದಿದ್ದಾರೆ.
ಎಲ್ಲಾ ರಕ್ಷಣಾ ಕಾರ್ಯ ಮುಗಿದ ಬಳಿಕ ಎಲ್ಲ ಕಾರ್ಮಿಕರ ಜೊತೆ ಫೋನ್ ಮೂಲಕ ಎಲ್ಲರ ಜೊತೆ ಮತನಾಡಿ ಧೈರ್ಯ ತುಂಬಿದ್ದಾರೆ, ಅಲ್ಲದೆ ಸುಮಾರು ಹದಿನೇಳು ದಿನಗಳ ಕಾಲ ಸುರಂಗದೊಳಗೆ ಇದ್ದ ಕಾರ್ಮಿಕರ ಮನಸ್ಥೈರ್ಯಕ್ಕೆ ಪ್ರಧಾನಿ ಅಭಾರಿಯಾಗಿದ್ದರೆ. ಇದರ ಜೊತೆಗೆ ರಕ್ಷಣಾ ತಂಡಕ್ಕೂ ಪ್ರಧಾನಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ನಿರಂತರ ಹದಿನೇಳು ದಿನಗಳ ಕಾರ್ಯಾಚರಣೆ ನಡೆಸಿ ಕಾರ್ಮಿಕರ ರಕ್ಷಣೆಯ ಕಾರ್ಯವನ್ನು ಸುಲಲಿತವಾಗಿ ಸಂಪೂರ್ಣಗೊಳಿಸಿದ ಎಲ್ಲ ರಕ್ಷಣಾ ಸಿಬ್ಬಂದಿಗೂ ಧನ್ಯವಾದಗಳನ್ನು ಹೇಳಿದ್ದಾರೆ.
ಈ ನಡುವೆ ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕರಿಗೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ 1 ಲಕ್ಷ ರೂ. ನೆರವು ಘೋಷಿಸಿದ್ದಾರೆ.
ಜೊತೆಗೆ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಜನರಲ್ (ನಿವೃತ್ತ) ವಿಕೆ ಸಿಂಗ್ ಅವರು 41 ಕಾರ್ಮಿಕರಿಗೆ ಹೂಮಾಲೆ ಹಾಕಿ ಸ್ವಾಗತಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.