ಮನೆ ಸುದ್ದಿ ಜಾಲ ನಾಳೆ ಬಸವ ಜಯಂತಿ ಕಾರ್ಯಕ್ರಮ

ನಾಳೆ ಬಸವ ಜಯಂತಿ ಕಾರ್ಯಕ್ರಮ

0

ಮೈಸೂರು(Mysuru): ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಸವ ಜಯಂತೋತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ 2022 ರ ಮೇ 3 ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಕರ್ನಾಟಕ ಕಲಾಮಂದಿರದಲ್ಲಿ ಬಸವ ಜಯಂತಿಯನ್ನು ಹಮ್ಮಿಕೊಳ್ಳಲಾಗಿದೆ

ಕಾರ್ಯಕ್ರಮವನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಉದ್ಘಾಟನೆ ಮಾಡುವರು. ಚಾಮರಾಜ ಕ್ಷೇತ್ರದ ವಿಧಾನಸಭೆ ಶಾಸಕರಾದ ಎಲ್.ನಾಗೇಂದ್ರ ಅವರು ಅಧ್ಯಕ್ಷತೆ ವಹಿಸುವರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮೈಸೂರು ಮಹಾನಗರ ಪಾಲಿಕೆಯ ಮಹಾಪೌರರಾದ ಸುನಂದಾ ಪಾಲನೇತ್ರ, ಸಂಸದರಾದ ಪ್ರತಾಪ್ ಸಿಂಹ, ವಿ.ಶ್ರೀನಿವಾಸ ಪ್ರಸಾದ್, ಮಂಡ್ಯ ಸುಮಲತಾ ಅಂಬರೀಷ್, ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.