ಮೈಸೂರು: ಸಂಸದ ಪ್ರತಾಪ್ ಸಿಂಹ ತಮ್ಮ ಹೆಸರನ್ನು ಇತ್ತೀಚಿಗೆ ಬದಲಾವಣೆ ಮಾಡಿಕೊಂಡಿದ್ದಾರೆ. ಅವರಿಗೆ ಸೋಲಿನ ಭೀತಿ ಕಾಡುತ್ತಿರುವುದರಿಂದ ತಮ್ಮ ಹೆಸರಿಗೆ ಇನ್ನೊಂದು ‘M’ ಸೇರಿಸಿಕೊಂಡಿದ್ದಾರೆ. ‘M’ ಅಂದರೆ mockery (ಅಪಹಾಸ್ಯ) ಪ್ರತಾಪ್ ಸಿಂಹ ಅಂತ ಹೇಳಬಹುದು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವ್ಯಂಗ್ಯವಾಡಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ತಾನು ಎರಡು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇನೆ ಎಂದು ಹೇಳಿದ ಪ್ರತಾಪ್ ಸಿಂಹ ಅವರ ಹೇಳಿಕೆಗೆ ತಿರುಗೇಟು ನೀಡಿದ ಲಕ್ಷ್ಮಣ್, 2 ಲಕ್ಷ ಅಂತರದಿಂದ ಗೆಲ್ಲುತ್ತೇನೆ ಎಂದು ಹೇಳಿಕೊಂಡಿದ್ದಾರೆ. ಅದು ಉಲ್ಟಾ ಆಗುತ್ತದೆ. ಅವರು 2 ಲಕ್ಷ ಅಂತರದಲ್ಲಿ ಸೋಲುತ್ತಾರೆ ಎಂದರು.
ನಮ್ಮ ಸರ್ಕಾರದ ಅವಧಿಯಲ್ಲಿ ತಂದ ಯೋಜನೆಗಳ ನಾನು ತಂದೆ ಅಂತ ಹೇಳಿಕೊಳ್ಳುತ್ತಾ ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದಾರೆ. ಕೇಂದ್ರದಿಂದ ನೀವು ಏನು ತಂದಿದ್ದೀರಿ ಅಂತ ಹೇಳಿ. ರಾಜ್ಯದಲ್ಲಿ ಉಡಾನ್ ಯೋಜನೆಯಡಿ ಪ್ರತಿ ಜಿಲ್ಲೆಗೂ ವಾಯು ಸಾರಿಗೆ ಸಂಪರ್ಕ ಕೊಡುತ್ತೇವೆ ಎಂದಿದ್ದರು. ಎಲ್ಲಿ ಮಾಡಿದ್ದೀರಿ ಅಂತ ಹೇಳಿ ಎಂದು ಲಕ್ಷ್ಮಣ್ ಪ್ರಶ್ನಿಸಿದರು.
ಮೈಸೂರು ಕುಶಾಲನಗರ ಹೈವೇ ಕಾಮಗಾರಿ ಎಲ್ಲಿ ಉಂಟು? ನಾಗನಹಳ್ಳಿ ರೈಲ್ವೆ ಸ್ಟೇಷನ್ ಅಭಿವೃದ್ಧಿ ಮಾಡುತ್ತೇವೆ ಅಂತ ಹೇಳಿದ್ದೀರಿ. ಅದು ಇನ್ನೂ ಹಾಗೇ ನಿಂತಿದೆ. ಸೆಮಿ ಕಂಡಕ್ಟರ್ ಉತ್ಪಾದನೆ ಘಟಕ ಮಾಡುತ್ತೇವೆ ಅಂತ ಹೇಳಿದ್ದಿರಿ. ಅದು ಎಲ್ಲೋಯ್ತು? ನೀವು ರಾಜ್ಯಕ್ಕೆ ಯಾವ ಯೋಜನೆ ತಂದಿದ್ದೀವಿ ಅಂತ ಒಂದು ಪಟ್ಟಿ ಬಿಡುಗಡೆ ಮಾಡಿ ಎಂದು ಸವಾಲು ಹಾಕಿದರು.
ಮಡಿಕೇರಿಯಲ್ಲಿ ಪೋಲಿಸರಿಗೆ ಧಮ್ಕಿ ಹಾಕುವ ಕೆಲಸ ಮಾಡಿದ್ದಾರೆ. ಇವರ ಮೇಲೆ ಪೋಲಿಸರು ಸಮೋಟೋ ಕೇಸ್ ದಾಖಲಿಸಬೇಕಿತ್ತು ಎಂದರು.
ವಿಪಕ್ಷ ನಾಯಕ ಆರ್ ಅಶೋಕ್ ರಾಜ್ಯದ ಆರ್ಥಿಕ ಪರಿಸ್ಥಿತಿ ಅದೋಗತಿಗೆ ಹೋಗಿದೆ, ಸರ್ಕಾರ ಶ್ವೇತ ಪತ್ರ ಹೊರಡಿಸಬೇಕು ಎನ್ನುತ್ತಾರೆ. ಸಿದ್ದರಾಮಯ್ಯ ಮೊದಲ ಬಾರಿ ಸಿಎಂ ಆಗಿದ್ದಾಗ 75 ಸಾವಿರ ಕೋಟಿ ಸಾಲ ಮಾಡಿದ್ದರು. 2018 ರಿಂದ 2023 ಮಾರ್ಜ್ ವರಗೆ ಮಾಡಿದ ಸಾಲ 2.18 ಲಕ್ಷ ಕೋಟಿ ಆಗಿದೆ. ಐದು ವರ್ಷದ ಬಿಜೆಪಿ ಸರ್ಕಾರದಲ್ಲಿ ಪ್ರತಿಯೊಬ್ಬರ ತಲೆ ಮೇಲೆ 1 ಲಕ್ಷದ 40 ಸಾವಿರ ಸಾಲ ಹೊರಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಪ್ರಧಾನಿ ಮೋದಿ ಪ್ರಚಾರಕ್ಕಾಗಿ ರಾಜ್ಯಕ್ಕೆ ಬರಲು 46 ಕೋಟಿ ಹಣ ರಾಜ್ಯ ಸರ್ಕಾರದ ಹಣ ಖರ್ಚು ಮಾಡಿದ್ದಾರೆ. 2023 ಸಾಲಿನಲ್ಲಿ ಪಂಚಾಯತ್ ರಾಜ್ ಇಲಾಖೆ, ಪಿಡಬ್ಲ್ಯೂಡಿ ಇಲಾಖೆ ಟೆಂಡರ್ ನಲ್ಲಿ ಲಕ್ಷಾಂತರ ಕೋಟಿ ಭ್ರಷ್ಟಾಚಾರ ಮಾಡಿದ್ದಾರೆ. ಇದು ಬಿಜೆಪಿ ಅವಧಿಯ ಶ್ವೇತ ಪತ್ರ. ಸಿಎಂ ಸಿದ್ದರಾಮಯ್ಯ ಅವರು ಆರು ತಿಂಗಳ ಅವಧಿಯ ಶ್ವೇತ ಪತ್ರ ಕೊಡುತ್ತಾರೆ. ನೀವು ಕಳೆದ ಸರ್ಕಾರದ ಅವಧಿಯ ಶ್ವೇತ ಪತ್ರ ಹೊರಡಿಸಿ ಎಂದು ಸವಾಲು ಹಾಕಿದರು.
ಸಿದ್ದರಾಮಯ್ಯ ಅವರನ್ನು ಹಣಕಾಸು ವಿಚಾರದಲ್ಲಿ ಎದುರಿಸಲು ನಿಮ್ಮಿಂದ ಆಗಲ್ಲ. ಅಂಕಿ ಅಂಶಗಳು ದಾಖಲೆಗಳನ್ನು ಇಟ್ಟುಕೊಂಡು ಆರೋಪ ಮಾಡಿ ಎಂದು ಅಶೋಕ್ ವಿರುದ್ದ ಲಕ್ಷ್ಮಣ್ ವಾಗ್ದಾಳಿ ನಡೆಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.