ಮನೆ ರಾಜ್ಯ ಮಹಾರಾಷ್ಟ್ರಕ್ಕೆ ರಾಜ್ಯದ ಒಂದಿಚೂ ಭೂಮಿಯನ್ನು ಬಿಟ್ಟು ಕೊಡುವುದಿಲ್ಲ: ಸಿಎಂ ಬೊಮ್ಮಾಯಿ

ಮಹಾರಾಷ್ಟ್ರಕ್ಕೆ ರಾಜ್ಯದ ಒಂದಿಚೂ ಭೂಮಿಯನ್ನು ಬಿಟ್ಟು ಕೊಡುವುದಿಲ್ಲ: ಸಿಎಂ ಬೊಮ್ಮಾಯಿ

0

ಬೆಂಗಳೂರು (Bengaluru)-ಮಹಾರಾಷ್ಟ್ರಕ್ಕೆ ಕರ್ನಾಟಕದ ಒಂದು ಇಂಚು ಭೂಮಿಯನ್ನು ಸಹ ಬಿಟ್ಟು ಕೊಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

ಇತ್ತೀಚೆಗೆ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರು ಕರ್ನಾಟಕದ ಗಡಿ ವಿಚಾರದ ಬಗ್ಗೆ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ  ಸಿಎಂ ಬಸವರಾಜ ಬೊಮ್ಮಾಯಿ ಅವರು, ಕನ್ನಡ ಮಾತನಾಡುವ ಪ್ರದೇಶಗಳು ಮಹಾರಾಷ್ಟ್ರದಲ್ಲೂ ಇವೆ. ಅವುಗಳನ್ನು ಹೇಗೆ ತೆಗೆದುಕೊಳ್ಳಬೇಕು ಅಂತ ನಾವು ಯೋಚಿಸುತ್ತಿದ್ದೇವೆ ಎಂದು ಅಜಿತ್ ಪವಾರ್ ಅವರಿಗೆ ತಿರುಗೇಟು ನೀಡಿದ್ದಾರೆ.

ನಮ್ಮ‌ ಒಂದಿಂಚೂ ಜಾಗವನ್ನೂ ಬಿಟ್ಟು ಕೊಡುವುದಿಲ್ಲ. ಮಹಾರಾಷ್ಟ್ರದಲ್ಲಿ ರಾಜಕಾರಣ ಯಾವಾಗ ಇಕ್ಕಟ್ಟಿಗೆ ಸಿಲುಕುತ್ತದೋ ಆಗ ಕರ್ನಾಟಕದ ಗಡಿ ವಿಚಾರದ ಬಗ್ಗೆ ಅವರು ಮಾತನಾಡುತ್ತಾರೆ. ಗಡಿ ವಿಚಾರದಲ್ಲಿ ಕರ್ನಾಟಕದ ನಿಲುವು ಸ್ಪಷ್ಟವಾಗಿದ್ದು, ನಾವು ಯಾವುದಕ್ಕೂ ಮಣಿಯುವುದಿಲ್ಲ. ನಮ್ಮ ನಿರ್ಧಾರಗಳಿಗೆ ನಾವು ದೃಢವಾಗಿ ನಿಲ್ಲುತ್ತೇವೆ ಎಂಬುದು ಅವರಿಗೂ (ಮಹಾರಾಷ್ಟ್ರ) ತಿಳಿದಿದೆ. ಮಹಾರಾಷ್ಟ್ರದ ರಾಜಕಾರಣಿಗಳು ತಮ್ಮ ರಾಜಕೀಯ ಉಳಿವಿಗಾಗಿ ಭಾಷೆ ಅಥವಾ ಗಡಿ ವಿವಾದವನ್ನು ಬಳಸಿಕೊಳ್ಳಬೇಡಿ ಎಂದು ಒತ್ತಾಯಿಸಿದರು.