ಮೈಸೂರು: ಕಾಂತರಾಜ್ ಸಮೀಕ್ಷೆ ಇನ್ನೂ ಸರ್ಕಾರದ ಕೈ ಸೇರಿಲ್ಲ ಆಗಲೇ ಇದಕ್ಕೆ ವಿರೋಧ ಮಾಡೋದು ಎಷ್ಟು ಸರಿ ಎಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್. ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಇಂದು ಮಾತನಾಡಿದ ಎಂಎಲ್ ಸಿ ಹೆಚ್.ವಿಶ್ವನಾಥ್ ಕಾಂತರಾಜ್ ವರದಿ ಸಮೀಕ್ಷೆ ಪರ ಬ್ಯಾಟ್ ಬೀಸಿದ್ದಾರೆ.
ಕಾಂತರಾಜ್ ವರದಿ ಜಾತಿಗಣತಿ ಅಲ್ಲ ಸಮೀಕ್ಷೆ. ಕೇವಲ ಒಂದು ಸಮುದಾಯದ ಪರವಾಗಿ ಮಾಡಿಲ್ಲ. ಪ್ರತಿಯೊಂದು ಸಮುದಾಯದಲ್ಲಿರುವ ಬಡ ಜನರ ಆರ್ಥಿಕ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಮಾಡಿರುವುದು. ಕಾಂತರಾಜ್ ಸಮೀಕ್ಷೆ ಇನ್ನ ಸರ್ಕಾರದ ಕೈ ಸೇರಿಲ್ಲ ಆಗಲೇ ಇದಕ್ಕೆ ವಿರೋಧ ಮಾಡೋದು ಎಷ್ಟು ಸರಿ. ಕುಮಾರಸ್ವಾಮಿ ಸಿಎಂ ಆಗಿದ್ದವರು, ಆ ರ್ ಅಶೋಕ್ ಡಿಸಿಎಂ ಆಗಿದ್ದವರು. ಏನಾದರು ಹೇಳಿಕೆ ನೀಡುವಾಗ ಸಂವಿಧಾನ ಚೌಕಟ್ಟಿನ ಒಳಗೆ ನೀಡಬೇಕು. ಆರ್ ಅಶೋಕ್ ವಿಪಕ್ಷ ನಾಯಕರಾಗಿದ್ದಾರೆ. ಏನೇನೋ ಹೇಳಿಕೆ ನೀಡೋದಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿರುವ ಆ ಸ್ಥಾನಕ್ಕೆ ತಕ್ಕಂತೆ ಮಾತನಾಡಬೇಕು. ಕಾಂತರಾಜ್ ವರದಿ ಸಮೀಕ್ಷೆಯನ್ನ ರಾಜ್ಯ ಸರ್ಕಾರ ಸ್ವೀಕಾರ ಮಾಡಬೇಕು. ತದ ನಂತರ ಅದನ್ನ ಅಧಿವೇಶನದಲ್ಲಿ ಚರ್ಚಿಸಬೇಕು ಎಂದರು.
ಶಾಸಕರು ಮತ್ತು ಸಚಿವರ ನಡುವೆ ಸಮನ್ವಯತೆ ಕೊರತೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಸಿಎಲ್ ಪಿ ಸಭೆ ಕರೆಯದಿರುವುದೇ ಇದಕ್ಕೆಲ್ಲ ಕಾರಣ. ಶಾಸಕರು ತಮ್ಮ ಅಭಿಪ್ರಾಯಗಳನ್ನ ಹೇಳುವ ಹಾಗೆಯೇ ಇಲ್ಲವಾ? ಸಚಿವರು ಶಾಸಕರಿಗೆ ಸ್ಪಂದಿಸದಿದ್ದಾಗ ಹೇಳಿಕೆ ನೀಡುತ್ತಾರೆ. ಕೆಲವೊಂದು ವಿಚಾರಗಳನ್ನ ಪಕ್ಷದ ಚೌಕಟ್ಟಿನ ಒಳಗೆ ಮಾತನಾಡಬೇಕು. ಬಿ. ಆರ್ ಪಾಟೀಲ್ ರನ್ನ ಸಿಎಂ ಕರೆದು ಮಾತನಾಡಿದ್ದಾರೆ. ಎಲ್ಲವು ಸರಿ ಹೋಗಿದೆ ಎಂದು ತಿಳಿಸಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.