ಮದ್ದೂರು:ಪಟ್ಟಣ, ತಾಲ್ಲೂಕು ಹಾಗೂ ಜಿಲ್ಲೆಯ ಹಲವು ಕಡೆಗಳಲ್ಲಿ ಮಹಿಳೆಯರ ಮಾಂಗಲ್ಯ ಸರ ಹಾಗೂ ಚಿನ್ನದ ಸರಗಳನ್ನು ಕಳ್ಳತನ ಮಾಡುತ್ತಿದ್ದ ಸರಗಳ್ಳನನ್ನು ಸ್ಥಳೀಯ ಪೊಲೀಸರು ಬಂಧಿಸಿ, ₹ 27.3 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಬೀದರ್ ಮೂಲದ ಜಾವೀದ್ ಬಾಲಿ ಜಾಫ್ರಿ ಎಂಬಾತನೇ ಬಂಧಿತ ಸರಗಳ್ಳ.
ಈತ ಕಳೆದ ತಿಂಗಳು ಮದ್ದೂರು ಪಟ್ಟಣದ ಎಸ್.ಬಿ.ಎಂ ರಸ್ತೆಯ ನಿವಾಸಿ 75 ವರ್ಷದ ವೃದ್ಧೆ ಕೆಂಪಮ್ಮ ಅವರ ಕೊರಳಲ್ಲಿದ್ದ 62 ಗ್ರಾಂ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದನು.
ಅಲ್ಲದೇ ತಾಲ್ಲೂಕಿನ ಬೆಸಗರಹಳ್ಳಿ, ಕೆ.ಎಂ.ದೊಡ್ಡಿ, ಮಂಡ್ಯದ ಶಿವಳ್ಳಿ ಸೇರಿದಂತೆ ರಾಮನಗರ ಜಿಲ್ಲೆಯ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲೂ ಮಹಿಳೆಯರ ಸರಗಳ್ಳತನ ಮಾಡಿದ್ದಾನೆ ಎನ್ನಲಾಗಿದ್ದು ಈ ಬಗ್ಗೆ ಸಂಬಂಧಪಟ್ಟ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದವು.
ಈತನಿಂದ ಸುಮಾರು ₹ 27.3 ಲಕ್ಷ ಬೆಲೆ ಬಾಳುವ ಚಿನ್ನದ ಸರಗಳು ಹಾಗೂ ಕೃತ್ಯಕ್ಕೆ ಬಳಸುತ್ತಿದ್ದ ಒಂದು ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿಯ ಪತ್ತೆಗೆ ಡಿವೈಎಸ್ಪಿ ಕೃಷ್ಣಪ್ಪ ಮಾರ್ಗದರ್ಶನದಲ್ಲಿ ಮದ್ದೂರು ಗ್ರಾಮಾಂತರ ಠಾಣೆ ಸಿಪಿಐ ವೆಂಕಟೇಗೌಡ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.