ಮನೆ ಅಪರಾಧ ಸರಗಳ್ಳನ ಬಂಧನ: ₹ 27.3 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಸರಗಳ್ಳನ ಬಂಧನ: ₹ 27.3 ಲಕ್ಷ ಮೌಲ್ಯದ ಚಿನ್ನಾಭರಣ ವಶ

0

ಮದ್ದೂರು:ಪಟ್ಟಣ, ತಾಲ್ಲೂಕು ಹಾಗೂ ಜಿಲ್ಲೆಯ ಹಲವು ಕಡೆಗಳಲ್ಲಿ ಮಹಿಳೆಯರ ಮಾಂಗಲ್ಯ ಸರ ಹಾಗೂ ಚಿನ್ನದ ಸರಗಳನ್ನು ಕಳ್ಳತನ ಮಾಡುತ್ತಿದ್ದ ಸರಗಳ್ಳನನ್ನು ಸ್ಥಳೀಯ ಪೊಲೀಸರು ಬಂಧಿಸಿ, ₹ 27.3 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.


ಬೀದರ್ ಮೂಲದ ಜಾವೀದ್ ಬಾಲಿ ಜಾಫ್ರಿ ಎಂಬಾತನೇ ಬಂಧಿತ ಸರಗಳ್ಳ.
ಈತ ಕಳೆದ ತಿಂಗಳು ಮದ್ದೂರು ಪಟ್ಟಣದ ಎಸ್.ಬಿ.ಎಂ ರಸ್ತೆಯ ನಿವಾಸಿ 75 ವರ್ಷದ ವೃದ್ಧೆ ಕೆಂಪಮ್ಮ ಅವರ ಕೊರಳಲ್ಲಿದ್ದ 62 ಗ್ರಾಂ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದನು.
ಅಲ್ಲದೇ ತಾಲ್ಲೂಕಿನ ಬೆಸಗರಹಳ್ಳಿ, ಕೆ.ಎಂ.ದೊಡ್ಡಿ, ಮಂಡ್ಯದ ಶಿವಳ್ಳಿ ಸೇರಿದಂತೆ ರಾಮನಗರ ಜಿಲ್ಲೆಯ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲೂ ಮಹಿಳೆಯರ ಸರಗಳ್ಳತನ ಮಾಡಿದ್ದಾನೆ ಎನ್ನಲಾಗಿದ್ದು ಈ ಬಗ್ಗೆ ಸಂಬಂಧಪಟ್ಟ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದವು.
ಈತನಿಂದ ಸುಮಾರು ₹ 27.3 ಲಕ್ಷ ಬೆಲೆ ಬಾಳುವ ಚಿನ್ನದ ಸರಗಳು ಹಾಗೂ ಕೃತ್ಯಕ್ಕೆ ಬಳಸುತ್ತಿದ್ದ ಒಂದು ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿಯ ಪತ್ತೆಗೆ ಡಿವೈಎಸ್‌ಪಿ ಕೃಷ್ಣಪ್ಪ ಮಾರ್ಗದರ್ಶನದಲ್ಲಿ ಮದ್ದೂರು ಗ್ರಾಮಾಂತರ ಠಾಣೆ ಸಿಪಿಐ ವೆಂಕಟೇಗೌಡ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು.