ಸಂದೀಪ್ ರೆಡ್ಡಿ ವಂಗಾ ಅವರು ನಿರ್ದೇಶನ ಮಾಡಿರುವ ‘ಅನಿಮಲ್’ ಸಿನಿಮಾ ಇಂದು (ಡಿ.1) ಬಿಡುಗಡೆ ಆಗಿದೆ. ಈ ಸಿನಿಮಾದಲ್ಲಿ ರಣಬೀರ್ ಕಪೂರ್ ಮತ್ತು ರಶ್ಮಿಕಾ ಮಂದಣ್ಣ ಅವರು ಜೋಡಿಯಾಗಿ ನಟಿಸಿದ್ದಾರೆ. ಬಾಬಿ ಡಿಯೋಲ್, ಅನಿಲ್ ಕಪೂರ್ ಮುಂತಾದವರು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.
ಅದ್ದೂರಿಯಾಗಿ ಮೂಡಿಬಂದಿರುವ ಈ ಸಿನಿಮಾವನ್ನು ಫಸ್ಟ್ ಡೇ ಫಸ್ಟ್ ಶೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.
‘ಅನಿಮಲ್’ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ದೃಶ್ಯಗಳು ಇವೆ. ಮಾಸ್ ಪ್ರೇಕ್ಷಕರಿಗೆ ಇದು ಇಷ್ಟ ಆಗಿದೆ. ರಣಬೀರ್ ಕಪೂರ್ ಅವರು ಎರಡು ಶೇಡ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಆ್ಯಕ್ಷನ್ ಅವತಾರದಲ್ಲಿ ಅವರ ಅಭಿನಯಕ್ಕೆ ಫ್ಯಾನ್ಸ್ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಕೆಲವು ನೆಟ್ಟಿಗರು ಈ ಸಿನಿಮಾಗೆ 5ಕ್ಕೆ 5 ಸ್ಟಾರ್ ನೀಡಿದ್ದಾರೆ. ಈ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಲಿದೆ ಎಂದು ಅನೇಕರು ಗ್ಯಾರಂಟಿ ನೀಡುತ್ತಿದ್ದಾರೆ.
ವಿಶೇಷ ಏನೆಂದರೆ, ‘ಅನಿಮಲ್’ ಸಿನಿಮಾದ ಅವಧಿ ಬರೋಬ್ಬರಿ 3 ಗಂಟೆ 21 ನಿಮಿಷ. ಸಾಮಾನ್ಯವಾಗಿ ಇಷ್ಟು ದೀರ್ಘವಾದ ಸಿನಿಮಾಗಳನ್ನು ನೋಡಲು ತಾಳ್ಮೆ ಬೇಕು. ಹಾಗಿದ್ದರೂ ಕೂಡ ಫಸ್ಟ್ ಡೇ ಫಸ್ಟ್ ಶೋ ನೋಡಿದ ಪ್ರೇಕ್ಷಕರು ಸಿನಿಮಾದ ಅವಧಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿಲ್ಲ. ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಅವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ನಂತರದ ಶೋಗಳಲ್ಲಿ ಪ್ರೇಕ್ಷಕರಿಂದ ಯಾವ ರೀತಿಯ ಅಭಿಪ್ರಾಯ ಬರಬಹುದು ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.
ಬಹುತೇಕ ಎಲ್ಲ ರಾಜ್ಯಗಳಲ್ಲಿ ‘ಅನಿಮಲ್’ ಸಿನಿಮಾ ಉತ್ತಮ ಓಪನಿಂಗ್ ಪಡೆದುಕೊಂಡಿದೆ. ಕನ್ನಡ, ಹಿಂದಿ, ತೆಲುಗು, ಮಲಯಾಳಂ, ತಮಿಳು ಭಾಷೆಯಲ್ಲಿ ಈ ಸಿನಿಮಾ ಬಿಡುಗಡೆ ಆಗಿದೆ. ಎಲ್ಲ ಕಡೆಗಳಲ್ಲೂ ರಣಬೀರ್ ಕಪೂರ್ ಅವರಿಗೆ ಅಭಿಮಾನಿಗಳು ಇದ್ದಾರೆ. ಅದೇ ರೀತಿ ರಶ್ಮಿಕಾ ಮಂದಣ್ಣ ಕೂಡ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಈ ಸಿನಿಮಾದಿಂದ ಅವರ ಚಾರ್ಮ್ ಹೆಚ್ಚಾಗಿದೆ. ಈ ಸಿನಿಮಾ ತುಂಬಾ ರಗಡ್ ಆಗಿ ಮೂಡಿಬಂದಿದೆ. ರಣಬೀರ್ ಕಪೂರ್ ಅವರ ವೃತ್ತಿ ಜೀವನದಲ್ಲಿ ಇದು ಡಿಫರೆಂಟ್ ಸಿನಿಮಾ ಎಂದು ಫ್ಯಾನ್ಸ್ ಹೇಳುತ್ತಿದ್ದಾರೆ.
‘ಅನಿಮಲ್’ ಸಿನಿಮಾ ಮೊದಲ ದಿನ ಅನೇಕ ಕಡೆಗಳಲ್ಲಿ ಹೌಸ್ ಫುಲ್ ಆಗಿದೆ. ಈ ಚಿತ್ರಕ್ಕೆ ಫಸ್ಟ್ ಡೇ ಭರ್ಜರಿ ಕಲೆಕ್ಷನ್ ಆಗಲಿದೆ ಎಂದು ಬಾಕ್ಸ್ ಆಫೀಸ್ ವ್ಯವಹಾರ ಬಲ್ಲವರು ಊಹಿಸಿದ್ದಾರೆ. ವಿಶ್ವಾದ್ಯಂತ 100 ಕೋಟಿ ರೂಪಾಯಿ ಕಲೆಕ್ಷನ್ ಆಗಬಹುದು ಎಂದು ಅಂದಾಜಿಸಲಾಗಿದೆ. ಚಿತ್ರದ ಮೇಕಿಂಗ್ ಸಖತ್ ಅದ್ದೂರಿಯಾಗಿದೆ ಎಂದು ಪ್ರೇಕ್ಷಕರು ಹೊಗಳುತ್ತಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.