ಮನೆ ರಾಜ್ಯ ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ: ಮಾಹಿತಿ ನೀಡಿದವರಿಗೆ 50 ಸಾವಿರ ನಗದು ಬಹುಮಾನ

ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ: ಮಾಹಿತಿ ನೀಡಿದವರಿಗೆ 50 ಸಾವಿರ ನಗದು ಬಹುಮಾನ

0

ಮೈಸೂರು: ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಸಂಬಂಧ ಮೈಸೂರು ಜಿಲ್ಲೆಯಲ್ಲಿ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಹೀಗಾಗಿ ಮೈಸೂರು ನಗರ ಜಿಲ್ಲೆಯ 139 ಸ್ಕ್ಯಾನಿಂಗ್ ಸೆಂಟರ್‌ನ ಮೇಲೆ ಹದ್ದಿನ ಕಣ್ಣಿಡಲಾಗಿದೆ.

ಭ್ರೂಣ ಪತ್ತೆ, ಹತ್ಯೆ ಬಗ್ಗೆ ಮಾಹಿತಿ ನೀಡಿದರೆ 50 ಸಾವಿರ ನಗದು ಬಹುಮಾನವಾಗಿ ನೀಡಲಾಗುತ್ತೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ.

ಮೈಸೂರಿನಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಸಂಬಂಧ ಮೈಸೂರಿನ ಮಾತಾ ಆಸ್ಪತ್ರೆಯಲ್ಲೆ ಆಪರೇಷನ್ ನಡೆಯುತಿತ್ತು ಎಂಬ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಮೈಸೂರಿನ‌ ತಾಲೂಕು ಆರೋಗ್ಯಧಿಕಾರಿ ಡಾ.ರಾಜೇಶ್ವರಿ ಮತ್ತು ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಜಿಲ್ಲಾ ಕುಟುಂಬ ಕಲ್ಯಾಣಧಿಕಾರಿ ಡಾ.ರವಿ ಅವರನ್ನ ಅಮಾನತು ಮಾಡಲಾಗಿತ್ತು. ಇನ್ನು ಈಗ ಈ ಪ್ರಕರಣ ಹೆಚ್ಚು ತೀವ್ರತೆ ಪಡೆಯುತ್ತಿದ್ದು ಮೈಸೂರು ಜಿಲ್ಲೆಯ 139 ಸ್ಕ್ಯಾನಿಂಗ್ ಸೆಂಟರ್‌ ಮೇಲೆ ತೀವ್ರ ನಿಗಾ ಇಡಲಾಗುತ್ತಿದೆ.

ಟಾಸ್ಕ್‌ ಪೋರ್ಸ್‌ ನಿಂದ ಎಲ್ಲಾ ಕಡೆ ನಿಗಾ ಇಡಲಾಗಿದೆ. ಭ್ರೂಣ ಪತ್ತೆ, ಹತ್ಯೆ ಬಗ್ಗೆ ಮಾಹಿತಿ ನೀಡಿದರೆ 50 ಸಾವಿರ ನಗದು ಬಹುಮಾನವಾಗಿ ನೀಡಲಾಗುತ್ತೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ.

ಮಾಹಿತಿ ನೀಡಿದವರ ಬಗ್ಗೆ ಗೌಪ್ಯತೆ ಕಾಪಾಡಲಾಗುವುದು. ದೊಡ್ಡ ಮಟ್ಟದ ಕಾರ್ಯಾಗಾರ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.