ಬೆಳಗಾವಿ: ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಮೇಲೆ ಚಾಕು ಇರಿತ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ, ಅವರ ಇಬ್ಬರು ಆಪ್ತರು ಹಾಗೂ ಇಬ್ಬರು ಗನ್ ಮ್ಯಾನ್ ಗಳ ವಿರುದ್ಧ ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಐಪಿಸಿ ಸೆಕ್ಷನ್ 1860 (U/s 143, 147, 148, 323, 324, 379, 504, 506), ಅಟ್ರಾಸಿಟಿ ಕೇಸ್, ಐಪಿಸಿ ಸೆಕ್ಷನ್ 1989 (u/s-3(1), (r)(s), 3(2)(v-a), IPC 1860(u/s-149 ರಡಿ ಪ್ರಕರಣ ದಾಖಲಿಸಲಾಗಿದೆ.
ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ, ಆಪ್ತ ಸುಜಿತ್ ಜಾಧವ್, ಸದ್ದಾಂ, ಚನ್ನರಾಜ ಹಟ್ಟಿಹೊಳಿಯ ಇಬ್ಬರು ಗನ್ ಮ್ಯಾನ್ ಗಳ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಪೃಥ್ವಿ ಸಿಂಗ್ ಪುತ್ರ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲು ಮಾಡಲಾಗಿದೆ.
ಪೃಥ್ವಿ ಸಿಂಗ್ ಮೇಲೆ ಸೋಮವಾರ ಚಾಕುವಿನಿಂದ ಇರಿಯಲಾಗಿತ್ತು. ಅದಾದ 18 ಗಂಟೆಗಳ ಬಳಿಕ, ಅಂದರೆ ಮಂಗಳವಾರ ಮಧ್ಯಾಹ್ನ ಆರೋಪಿಗಳ ವಿರುದ್ಧ ಪೃಥ್ವಿ ಸಿಂಗ್ ಪುತ್ರ ಎಪಿಎಂಸಿ ಠಾಣೆಗೆ ದೂರು ನೀಡಿದ್ದಾರೆ.
ಘಟನೆ ವಿವರ:
ರಾಜ್ಯ ಬಿಜೆಪಿ ಕಾರ್ಯಕಾರಣಿ ಸದಸ್ಯರೂ ಆಗಿರುವ ಶಾಸಕ ರಮೇಶ್ ಜಾರಕಿಹೊಳಿ ಅತ್ಯಾಪ್ತ ಪೃಥ್ವಿ ಸಿಂಗ್ ಮೇಲೆ ಸೋಮವಾರ ಸಂಜೆ ಬೆಳಗಾವಿ ಜಿಲ್ಲೆಯ ಜಯನಗರದಲ್ಲಿ ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ ಆಪ್ತರು ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದರು. ಪೃಥ್ವಿ ಸಿಂಗ್ ಅವರ ಕೈ ಹಾಗೂ ಬೆನ್ನಿಗೆ ಗಾಯಗಳಾಗಿದ್ದು, ಅವರನ್ನು ಬಳಿಕ ಬೆಳಗಾವಿಯ ಕೆಎಲ್ ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆರೋಗ್ಯ ಸಲಹೆ…..
ಪಾರ್ವತಿ ದೇವಿ ಚಂದ್ರಘಂಟ ಹೇಗಾದರೂ ಗೊತ್ತ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ನವರಾತ್ರಿಯ ಎರಡನೇ ದಿನವಾದ ಇಂದು ತಾಯಿ ಬ್ರಹ್ಮಚಾರಿಣಿಯನ್ನ ಪೂಜಿಸಲಾಗುತ್ತೆ
ನಬಾರ್ಡ್ ಬ್ಯಾಂಕ್ ನಲ್ಲಿ ಆಫೀಸರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿ
ಹೆಚ್ಎಎಲ್ ನಲ್ಲಿ ವಿವಿಧ ಹುದ್ದೆಗಳಿಗೆ ಆಹ್ವಾನ
ಅಂತ್ಯ ಸಂಸ್ಕಾರಕ್ಕೆ ಜಾಗವಿಲ್ಲ…
ದಸರಾ ಸಮಯದಲ್ಲಿ ನೆನೆಯಬೇಕಾದ ಸಮಾಧಿಗಳು
70 ವರ್ಷ ಮೇಲ್ಪಟ್ಟ ಹಿರಿಯ ವಯಸ್ಕರಿಗೂ ಲಭಿಸುತ್ತದೆ ಆಯುಷ್ಮಾನ್ ಭಾರತ್ ಯೋಜನೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.