ನವದೆಹಲಿ: ಖಲಿಸ್ತಾನಿ ಭಯೋತ್ಪಾದಕ ಗುರ್ಪತ್ವಂತ್ ಸಿಂಗ್ ಪನ್ನುನ್ ಮತ್ತೆ ಬೆದರಿಕೆ ಹಾಕುವ ಮೂಲಕ ಪ್ರಚಾರದಲ್ಲಿದ್ದಾನೆ. ಈ ಬಾರಿ ಡಿಸೆಂಬರ್ 13 ರಂದು ಅಥವಾ ಅದಕ್ಕೂ ಮೊದಲು ಭಾರತೀಯ ಸಂಸತ್ತಿನ ಮೇಲೆ ದಾಳಿ ನಡೆಸುವುದಾಗಿ ಹೇಳಿರುವ ವೀಡಿಯೊವನ್ನು ಬಿಡುಗಡೆ ಮಾಡಿದ್ದಾನೆ.
2001 ಡಿಸೆಂಬರ್ 13ರಂದು ಸಂಸತ್ ಮೇಲೆ ದಾಳಿ ಮಾಡಿದ್ದರು. ಅದೇ ದಿನ ನಾವು ಕೂಡ ಸಂಸತ್ ಮೇಲೆ ದಾಳಿ ಮಾಡುತ್ತೇವೆ ಎಂದು ವಿಡಿಯೋದಲ್ಲಿ ಹೇಳಿದ್ದಾನೆ. ಡಿಸೆಂಬರ್ 13ರಂದು ಸಂಸತ್ತಿನ ಅಡಿಪಾಯವನ್ನೇ ಅಲುಗಾಡಿಸುತ್ತೇನೆ ಎಂದು ಈ ವಿಡಿಯೋದಲ್ಲಿ 2001ರಲ್ಲಿ ಸಂಸತ್ ಮೇಲೆ ದಾಳಿ ನಡೆಸಿದ ಭಯೋತ್ಪಾದಕ ಅಫ್ಜಲ್ ಫೋಟೋ ಇರುವ ವಿಡಿಯೋವನ್ನು ಹಂಚಿಕೊಂಡಿದ್ದಾನೆ.
ಈ ಪೋಸ್ಟರ್ ನಲ್ಲಿ “ದೆಹಲಿ ಬಂಗೇಯಾ ಖಲಿಸ್ತಾನ್” ಎಂದೂ ಬರೆಯಲಾಗಿದೆ. ಭಾರತೀಯ ಏಜೆನ್ಸಿಗಳು ತನ್ನನ್ನು ಕೊಲ್ಲುವ ಸಂಚು ರೂಪಿಸಿತ್ತು. ಆದರೆ ಇದು ವಿಫಲವಾಗಿದೆ ಎಂದು ಪನ್ನುನ್ ಹೇಳಿದ್ದಾನೆ. ಬೆದರಿಕೆ ವಿಡಿಯೋ ಬಿಡುಗಡೆ ಮಾಡಿದ ಬೆನ್ನಲ್ಲೇ ಭಾರತೀಯ ಭದ್ರತಾ ಏಜೆನ್ಸಿಗಳು ಕಟ್ಟೆಚ್ಚರ ವಹಿಸಿವೆ.
ಭಾರತ ವಿರೋಧಿ ವರದಿಗಳನ್ನು ಪ್ರಚಾರ ಮಾಡುವ ಕೆಲಸವನ್ನು ಮುಂದುವರಿಸಲು ಪಾಕಿಸ್ತಾನದ ಗುಪ್ತಚರ ಸಂಸ್ಥೆ ISI ಪನ್ನುನ್ ಗೆ ನಿರ್ದೇಶನಗಳನ್ನು ನೀಡಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಕಳೆದ ತಿಂಗಳು, US ದೈನಿಕವು ಪನ್ನುನ್ ನನ್ನು ಕೊಲ್ಲಲು ಸಂಚು ರೂಪಿಸಿತ್ತು, ಆದರೆ ಯುಎಸ್ ಅಧಿಕಾರಿಗಳು ಇದನ್ನು ವಿಫಲಗೊಳಿಸಿದ್ದಾರೆ ಮತ್ತು ಸಂಚಿನ ಬಗ್ಗೆ ಭಾರತದ ಜತೆಗೆ ಕಳವಳ ವ್ಯಕ್ತಪಡಿಸಿದ್ದಾರೆ.
ಯುಎಸ್ ಫೆಡರಲ್ ಪ್ರಾಸಿಕ್ಯೂಟರ್ ಗಳು ನೀಡಿದ ವರದಿ ಪ್ರಕಾರ ನಿಖಿಲ್ ಗುಪ್ತಾ ಎಂಬ 52 ವರ್ಷದ ವ್ಯಕ್ತಿ ಪನ್ನುನ್ ನನ್ನು ಕೊಲ್ಲಲು ಸಂಚು ರೂಪಿಸಿದರು. ಆದರೆ ಇದನ್ನು ಯುಎಸ್ಗೆ ಅಧಿಕಾರಿಗಳು ವಿಫಲಗೊಳಿಸಿದರು. ನಿಖಿಲ್ ಗುಪ್ತಾ ಅವರನ್ನು ಜೂನ್ ನಲ್ಲಿ ಜೆಕ್ ರಿಪಬ್ಲಿಕ್ ನಲ್ಲಿ ಕೊಲೆಗೆ ಸಂಚು ರೂಪಿಸಿದ ಆರೋಪದ ಮೇಲೆ ಬಂಧಿಸಲಾಯಿತು.
ಈ ಇನ್ನು ಕೊಲೆ ಪ್ರಯತ್ನಕ್ಕೂ ಭಾರತಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಭಾರತ ಹೇಳಿದೆ. ಈ ಬಗ್ಗೆ ಭಾರತ ಸರ್ಕಾರ ತನಿಖೆ ಮಾಡಿ ವರದಿ ನೀಡಲಾಗುವುದು ಎಂದು ಹೇಳಿದೆ. ಇದರ ಜತೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಸಿಖ್ ಪ್ರತ್ಯೇಕತಾವಾದಿಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ, 1967 ರ ಅಡಿಯಲ್ಲಿ ಪ್ರಕರಣ ದಾಖಲಿಸಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.