ಮನೆ ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಹತ್ಯೆ ಹೊಣೆ ಹೊತ್ತ ಗೋಲ್ಡಿ ಬ್ರಾರ್...

ರಜಪೂತ ಕರ್ಣಿ ಸೇನಾ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಹತ್ಯೆ ಹೊಣೆ ಹೊತ್ತ ಗೋಲ್ಡಿ ಬ್ರಾರ್ ಗ್ಯಾಂಗ್‌

0

ಜೈಪುರ: ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಹತ್ಯೆಯ ಹೊಣೆಯನ್ನು ಗೋಲ್ಡಿ ಬ್ರಾರ್ ಗ್ಯಾಂಗ್‌ ಹೊತ್ತುಕೊಂಡಿದೆ.

ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ದುಷ್ಕರ್ಮಿಗಳ ಗುಂಪೊಂದು ಮಂಗಳವಾರ ಗುಂಡಿಕ್ಕಿ ಹತ್ಯೆ ಮಾಡಿತ್ತು. ಗೋಲ್ಡಿ ಬ್ರಾರ್ ಗ್ಯಾಂಗ್‌ನ ಸದಸ್ಯ ರೋಹಿತ್ ಗೋಡರಾ ಕಪುರಿಸ್ರ್ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದ್ದಾನೆ.

ಸುಖದೇವ್ ಸಿಂಗ್ ಗೊಗಮೆಡಿ ಹತ್ಯೆಯ ಸಂಪೂರ್ಣ ಜವಾಬ್ದಾರಿಯನ್ನು ನಾವು ತೆಗೆದುಕೊಳ್ಳುತ್ತೇವೆ ಎಂದು ರೋಹಿತ್ ಫೇಸ್‌ ಬುಕ್‌ ನಲ್ಲಿ ಪೋಸ್ಟ್‌ ಮಾಡಿದ್ದು, ಗೊಡಮೇಡಿ ನಮ್ಮ ಶತ್ರುಗಳನ್ನು ಬೆಂಬಲಿಸುತ್ತಿದ್ದರು ಎಂದು ದೂರಿದ್ದಾರೆ.

ಗೋಲ್ಡಿ ಬ್ರಾರ್ ಗ್ಯಾಂಗ್‌ ಕೆನಡಾ ಮೂಲದ ದರೋಡೆಕೋರರಾಗಿದ್ದು, ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಹತ್ಯೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಗಳಿಗೆ ಬೇಕಾಗಿದ್ದಾರೆ.

ಸುಖದೇವ್ ಸಿಂಗ್ ಗೊಗಮೆಡಿ ಅವರ ಹತ್ಯೆ ಖಂಡಿಸಿ ಹಲವು ರಜಪೂತ ಸಂಘಟನೆಗಳು ಇಂದು (ಬುಧವಾರ) ರಾಜಸ್ಥಾನ ಬಂದ್‌ಗೆ ಕರೆ ನೀಡಿವೆ.