ಬೆಳಗಾವಿ: ಟಿಪ್ಪರ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಾಲಕಿ ಸೇರಿ ಇಬ್ಬರು ಸಜೀವ ದಹನವಾಗಿರುವ ಘಟನೆ ಬೆಳಗಾವಿ ತಾಲೂಕಿನ ದೇವಗಿರಿ ಬಂಬರಗಾ ಕ್ರಾಸ್ ಬಳಿ ಸಂಭವಿಸಿದೆ.
ಬಂಬರಗಾ ಗ್ರಾಮದ ಮೋಹನ್ ಮಾರುತಿ ಬೆಳ್ಗಾಂವಕರ್(24) ಹಾಗೂ ಮಚ್ಚೆ ಗ್ರಾಮದ ಬಾಲಕಿ ಸಮಿಕ್ಷಾ ಡಿಯೇಕರ್(12) ಮೃತ ದುರ್ದೈವಿಗಳು.
ಮದುವೆ ಮುಗಿಸಿಕೊಂಡು ವಾಪಸ್ ಬಂಬರಗಾ ಗ್ರಾಮಕ್ಕೆ ಹೊರಟಿದ್ದ ಕಾರು, ಅಡ್ಡ ಬಂದ ಟಿಪ್ಪರ್ ಗೆ ಗುದ್ದಿದೆ. ಪರಿಣಾಮ ಟಿಪ್ಪರ್ ನ ಡಿಸೇಲ್ ಟ್ಯಾಂಕ್ ಒಡೆದು ಬೆಂಕಿ ಹೊತ್ತಿಕೊಂಡಿದೆ. ಈ ಹಿನ್ನೆಲೆಯಲ್ಲಿ ಎರಡೂ ವಾಹನಗಳು ಹೊತ್ತಿ ಉರಿದಿದ್ದು, ಕಾರಿನಲ್ಲಿದ್ದ ಕಾರಿನಲ್ಲಿದ್ದ ಸಮಿಕ್ಷಾ ಮತ್ತು ಮೋಹನ್ ಮಾರುತಿ ಸಜೀವ ದಹನವಾಗಿದ್ದಾರೆ. ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ.
ಕಾರಿನಲ್ಲಿದ್ದ ಇನ್ನುಳಿದ ಮಹೇಶ್ ಬೆಳ್ಗಾಂವಕರ್ ಮತ್ತು ಸ್ನೇಹಾ ಬೆಳ್ಗುಂದ್ಕರ್ ಎನ್ನುವರನ್ನು ಸ್ಥಳೀಯರು ರಕ್ಷಣೆ ಮಾಡಿ ಆಸ್ಪತ್ರೆಗೆ ಸಾಗಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಗ್ನಿ ಶಾಮಕ ದಳ ಹಾಗೂ ಪೊಲೀಸರು ದೌಡಾಯಿಸಿದ್ದು, ಬೆಂಕಿ ನಂದಿಸಿದ್ದಾರೆ.
ಇನ್ನು ಸ್ಥಳಕ್ಕೆ ಡಿಸಿಪಿ ಸ್ನೇಹಾ, ಎಸಿಪಿ ಮತ್ತು ಕಾಕತಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಇಬ್ಬರ ಶವವನ್ನ ಮರಣೋತ್ತರ ಪರೀಕ್ಷೆಗೆ ಬಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ರವಾನಿಸಿದ್ದಾರೆ.
ಅಪಘಾತವಾಗುತ್ತಿದ್ದಂತೆಯೇ ಟಿಪ್ಪರ್ ಚಾಲಕ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.