ಮನೆ ರಾಜ್ಯ ಆಡಳಿತ ಮಂಡಳಿ ಕಿರುಕುಳಕ್ಕೆ ಬೇಸತ್ತು ಎಎಸಿ ಸಿಮೆಂಟ್​ ಕಾರ್ಖಾನೆ ಡೆಪ್ಯುಟಿ ಮ್ಯಾನೇಜರ್​ ಆತ್ಮಹತ್ಯೆ

ಆಡಳಿತ ಮಂಡಳಿ ಕಿರುಕುಳಕ್ಕೆ ಬೇಸತ್ತು ಎಎಸಿ ಸಿಮೆಂಟ್​ ಕಾರ್ಖಾನೆ ಡೆಪ್ಯುಟಿ ಮ್ಯಾನೇಜರ್​ ಆತ್ಮಹತ್ಯೆ

0

ಕಲಬುರಗಿ: ಆಡಳಿತ ಮಂಡಳಿಯವರ ಕಿರುಕುಳಕ್ಕೆ ಬೇಸತ್ತು ಎಎಸಿ ಸಿಮೆಂಟ್​ ಕಾರ್ಖಾನೆ ಡೆಪ್ಯುಟಿ ಮ್ಯಾನೇಜರ್​ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಮನೆಯಲ್ಲಿ ನೇಣು ಬಿಗಿದುಕೊಂಡು ರಮೇಶ್​​ ಪವಾರ್​​(47) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತ ರಮೇಶ್​​​​​, ಚಿತ್ತಾಪುರ ಮಾಜಿ ಶಾಸಕ ದಿ.ವಾಲ್ಮಿಕಿ ನಾಯಕ್ ಅಳಿಯನಾಗಿದ್ದು, ಅದಾನಿ ಗ್ರೂಪ್ ಮಾಲಿಕತ್ವದಲ್ಲಿರುವ ಎಸಿಸಿ ಸಿಮೆಂಟ್ ಕಾರ್ಖಾನೆಯಲ್ಲಿ ಡೆಪ್ಯುಟಿ ಮ್ಯಾನೇಜರ್ ಆಗಿದ್ದರು. ಆದರೆ ಕಾರ್ಖಾನೆ ಆಡಳಿತ ಮಂಡಳಿಯವರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೂ ಮುನ್ನ ವಿಡಿಯೋ ರೆಕಾರ್ಡ್​ ಮಾಡಿದ್ದು, ​​​​ ಕಾರ್ಖಾನೆ ಹಿರಿಯ ಅಧಿಕಾರಿಗಳ ಹೆಸರು ಉಲ್ಲೇಖಿಸಿದ್ದಾರೆ. ಈ ಬಗ್ಗೆ ವಾಡಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.