ಮನೆ ರಾಜ್ಯ ರಾಜ್ಯ ಕಾಂಗ್ರೆಸ್ ಸರ್ಕಾರ ಅತ್ಯಂತ ಕೆಟ್ಟ ಸರ್ಕಾರ: ಆರ್.ಅಶೋಕ್ ಕಿಡಿ

ರಾಜ್ಯ ಕಾಂಗ್ರೆಸ್ ಸರ್ಕಾರ ಅತ್ಯಂತ ಕೆಟ್ಟ ಸರ್ಕಾರ: ಆರ್.ಅಶೋಕ್ ಕಿಡಿ

0

ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರ ಅತ್ಯಂತ ಕೆಟ್ಟ ಸರ್ಕಾರ. ವೋಟಿಗೋಸ್ಕರವಷ್ಟೆ ಇರೋದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ರೈತರಿಗೆ ಹಣ ಕೊಡೋಕೆ ಆಗಲ್ಲ. ಮೌಲ್ವಿಗಳಿಗೆ ಕೊಡ್ತಾರೆ.   ಮೌಲ್ವಿಗಳಿಗೆ 10 ಸಾವಿರ ರೂ ಹಣ ಕೊಡ್ತಾರೆ. ಫ್ರೀಗೋಸ್ಕರ ದಲಿತರ ಹಣ ದುರ್ಬಳಕೆ ಮಾಡಿಕೊಂಡಿದ್ದೀರಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಗೋಶಾಲೆಗಳನ್ನ ಎಲ್ಲೂ ಓಪನ್ ಮಾಡಿಲ್ಲ ಇರೋದನ್ನ ಮುಚ್ಚುತ್ತಾರೆ.  ಮೌಲ್ವಿಗಳಿಗೆ ಕೊಡಲು ಜೇಬಿನಲ್ಲಿ ದುಡ್ಡು ಇಟ್ಟುಕೊಂಡು ಓಡಾಡುತ್ತಾರೆ. ಇದು ಒಡೆದು ಆಳುವ ನೀತಿ ಎಂದು ಆರ್.ಅಶೋಕ್ ಹೇಳಿದ್ದಾರೆ.