ಮನೆ ಅಪರಾಧ ಸಿಂಧನೂರು ಸಮೀಪ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರ ಸಾವು

ಸಿಂಧನೂರು ಸಮೀಪ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರ ಸಾವು

0

ರಾಯಚೂರು: ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಸಮೀಪ  ಭೀಕರ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿಯಾಗಿ ಟಾಟಾ ಏಸ್ ​​ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಇಸ್ಮಾಯಿಲ್(25), ಚನ್ನಬಸವ(26), ಅಂಬರೀಶ್(20), ರವಿ(21) ಮೃತ ದುರ್ವೈವಿಗಳು.

ಮೃತ ನಾಲ್ವರು ಮದುವೆ ಸಮಾರಂಭ ನಿಮಿತ್ತವಾಗಿ ಡೆಕೊರೇಶನ್ ಹಾಗೂ ಶಾಮಿಯಾನ ಹಾಕಲು ಟಾಟಾ ಏಸ್ ​ನಲ್ಲಿ ಸಿಂಧನೂರಿನಿಂದ ಮಸ್ಕಿ ತಾಲ್ಲೂಕಿನ ಮದ್ಲಾಪುರ ಗ್ರಾಮಕ್ಕೆ ಹೋಗುತ್ತಿದ್ದರು. ಆದರೆ  ಮಾರ್ಗ ಮಧ್ಯೆ ಪಗಡದಿನ್ನಿ ಕ್ಯಾಂಪ್ ಬಳಿ ಈ ದುರ್ಘಟನೆ ಸಂಭವಿಸಿದೆ.

ಇನ್ನು ಘಟನೆಯಲ್ಲಿ ಸಮೀರ್ ಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಸಿಂಧನೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸದ್ಯ ಮೃತದೇಹಗಳನ್ನ ಸಿಂಧನೂರು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಈ ಬಗ್ಗೆ ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.