ಮೈಸೂರು: ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರು ನೊಂದಾಯಿಸಿಕೊಳ್ಳುವoತೆ ಹಾಗೂ ವಿಕಲಚೇತನರು, ಲಿಂಗ ಅಲ್ಪಸಂಖ್ಯಾತರು, ಹಿರಿಯ ನಾಗರೀಕರು ಒಳಗೊಳ್ಳುವಂತೆ ನೋಡಿಕೊಳ್ಳಿ ಎಂದು ಅಪರ ಮುಖ್ಯ ಚುನಾವಣಾಧಿಕಾರಿಗಳಾದ ಕೂರ್ಮಾರಾವ್ ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮತದಾರರ ಪಟ್ಟಿ ಪರಿಷ್ಕರಣೆ ಸಂಬoಧ ಹಮ್ಮಿಕೊಂಡಿದ್ದ ವಿವಿಧ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಮತದಾರರ ಪಟ್ಟಿಗೆ ಹೆಸರನ್ನು ಸೇರಿಸಲು ಸ್ವೀಪ್ ಚಟುವಟಿಕೆಗಳನ್ನು ಮಾಡಲಾಗುತ್ತದೆ. ಆದರೂ ಶೇ.100 ರಷ್ಟು ನೋಂದಣಿ ಆಗುತ್ತಿಲ್ಲ. ಮತ್ತಷ್ಟು ಜಾಗೃತಿ ಕಾರ್ಯಕ್ರಮಗಳು ಬೀದಿನಾಟಕಗಳನ್ನು ಏರಪಡಿಸುವ ಮೂಲಕ ಜಾಗೃತಿ ಮೂಡಿಸಿ, ಮತದಾರರ ಪಟ್ಟಿಗೆ ಸೇರ್ಪಡೆ ಬಗ್ಗೆ ಮಾಹಿತಿಗೆ ವೋಟರ್ ಹೆಲ್ಪ್ಲೈನ್ 1950 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ. ಫಾರ್ಮ್ 6 ರಲ್ಲಿ ಯಾವುದೇ ರಿಜಕ್ಷನ್ ಆಗಿದ್ದರೆ ಸೂಪರ್ ಚಕ್ಕಿಂಗ್ ನಲ್ಲಿ 2 ಬಾರಿ ಪರಿಶೀಲಿಸಿಕೊಳ್ಳಲು ತಿಳಿಸಿ
ವಿಳಾಸ ಬದಲಾವಣೆ ಆಗಿದ್ದರೆ ಫಾರಂ 08 ರ ಅರ್ಜಿ ಸಲ್ಲಿಸಿ ಮತದಾರರ ಪಟ್ಟಿಯ ಹೆಸರನ್ನು ಬೇರೆಡೆಗೆ ವರ್ಗಾಯಿಸಬಹುದಾಗಿದೆ. ಬಿ.ಎಲ್.ಓ ಗಳು ಹೆಚ್ಚಾಗಿ ಬೆಳಿಗ್ಗೆ ಮತ್ತು ಸಂಜೆ ವೇಳೆ ಮನೆ ಮನೆಗೆ ಭೇಟಿ ನೀಡಬೇಕು. ಕೆಲಸಕ್ಕೆ ಹೋಗುವವರು ಬೆಳಿಗ್ಗೆ ಮತ್ತು ಸಂಜೆ ಮನೆಯಲ್ಲಿ ಲಭ್ಯವಿರುತ್ತಾರೆ. ವಿ.ವಿ ಪ್ಯಾಟ್ಗಳ ಮೂಲಕ ಮತದಾರರಿಗೆ ಮತದಾನದ ಕುರಿತು ಅರಿವು ಜಾಗೃತಿ ಮೂಡಿಸಿ ಎಂದರು.
ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಮಾತನಾಡಿ ವಿಳಾಸ ಬದಲಾವಣೆ ಅಥವಾ ಮರಣ ಹೊಂದಿರುವವರ ಹೆಸರನ್ನು ತೆಗೆದು ಹಾಕುವಾಗ ಎಚ್ಚರಿಕೆಯಿಂದ ಪರಿಶೀಲನೆ ನಡೆಸಬೇಕು. ಮರಣ ಹೊಂದಿರುವವರ ಹೆಸರನ್ನು ತೆಗೆದು ಹಾಕುವಾಗ ಅವರ ಡೆತ್ ಸರ್ಟಿಫಿಕೇಟ್ ಅಥವಾ ಕುಟುಂಬ ಸದಸ್ಯರ ಸಹಿ ಪಡೆಯಬೇಕು ಎಂದರು.
ಮೈಸೂರು ಜಿಲ್ಲೆಯಲ್ಲಿ ಹಾಡಿಗಳು ಹೆಚ್ಚು ಇದ್ದು, ಜೇನು ಕುರುಬ, ಕಾಡು ಕುರುಬ, ಬೆಟ್ಟ ಕುರುಬ ಸೇರಿದಂತೆ ಹಲವು ಬುಡಕಟ್ಟು ಜನಾಂಗಗಳು, ಪರಿಶಿಷ್ಟ ಪಂಗಡಗಳ ಜನರು ಹೆಚ್ಚು ಇದ್ದಾರೆ ಅಂತಹವರು ಯಾರೊಬ್ಬರೂ ಮತದಾಯ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳಿ. ಅಲೆಮಾರಿಗಳು, ಭಕ್ಷುಕರ ಕೇಂದ್ರ ಗಳು ಇರುವಲ್ಲಿಗೆ ತೆರಳಿ ಮತದಾನ ಜಾಗೃತಿ ಹಾಗೂ ನೋಂದಣಿಗೆ ಕ್ರಮವಹಿಸಿ, 18 ವರ್ಷ ತುಂಬಿದ ಪ್ರತಿಯೊಬ್ಬರನ್ನು ನೋಂದಣಿ ಮಾಡಿಸಿ. ಜಿಲ್ಲೆಯ ಕಾಲೇಜುಗಳಿಗೆ ಭೇಟಿ ನೀಡಿ 18 ವರ್ಷ ಪೂರೈಸಿದವರನ್ನು ಮತದಾರರ ಪಟ್ಟಿಗೆ ಹೆಸರನ್ನು ನೋಂದಣಿ ಮಾಡಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯಲ್ಲಿ ಇರುವ 18 ವರ್ಷ ತುಂಬಿದ ಎಲ್ಲಾ ತೃತೀಯ ಲಿಂಗಿಗಳಿಗೆ ಎಪಿಕ್ ಕಾರ್ಡ್ ನೀಡಲು ಅಗತ್ಯ ಕ್ರಮ ಕೈಗೊಳ್ಳಿ. ಫೀ ಮೇಲ್ ಸೆಕ್ಸ್ ವರ್ಕರ್ಸ್ ಗಳಿಗೆ ಶೇ.100 ರಷ್ಟು ಎಪಿಕ್ ಕಾರ್ಡ್ ಇರುವ ಹಾಗೆ ನೋಡಿಕೊಳ್ಳಿ. ಅವರ ಬಗೆಗೆ ಎನ್.ಜಿ.ಓ ಗಳ ಬಳಿ ಮಾಹಿತಿಯನ್ನು ಪಡೆದುಕೊಳ್ಳಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರಿಗೆ ಸೂಚನೆ ನೀಡಿದರು.
ಕಳೆದ ಚುನಾವಣೆಯಲ್ಲಿ ಯಾವ ವಾರ್ಡ್ಗ ಳಲ್ಲಿ ಮತದಾನ ಕಡಿಮೆ ಆಗಿದೆ ಎಂಬುದನ್ನು ಗುರುತಿಸಿಕೊಂಡು, ಕೆಲವರು ಬೇರೆ ಕಡೆ ಹೋಗಿರುತ್ತಾರೆ. ಅವರಿಗೆ ಫಾರಂ 08 ರಲ್ಲಿ ಅವರು ಇರುವೆಡೆ ಹೆಸರನ್ನು ಬದಲಾವಣೆ ಮಾಡಿಸಿದರೆ ಅವರು ಅಲ್ಲಿಯೇ ಮತದಾನ ಮಾಡಲು ಸಾಧ್ಯವಾಗುತ್ತದೆ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ ಗಾಯತ್ರಿ ಅವರು ಸೇರದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.