ಮನೆ ರಾಷ್ಟ್ರೀಯ ತೆಲಂಗಾಣ: “ಮಹಾಲಕ್ಷ್ಮಿ” ಯೋಜನೆಗೆ ಅಧಿಕೃತ ಚಾಲನೆ

ತೆಲಂಗಾಣ: “ಮಹಾಲಕ್ಷ್ಮಿ” ಯೋಜನೆಗೆ ಅಧಿಕೃತ ಚಾಲನೆ

0

ಹೈದರಾಬಾದ್: ತೆಲಂಗಾಣದಲ್ಲಿ ಕಾಂಗ್ರೆಸ್​​​ ಪಕ್ಷ ಅಧಿಕಾರಕ್ಕೆ ಬಂದಿದ್ದು ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಅಧಿಕಾರ ಸ್ವೀಕರಿಸಿದ್ದಾರೆ. ಅಧಿಕಾರ ಸ್ವೀಕರದ ವೇಳೆ ಆರು ಗ್ಯಾರಂಟಿಗಳಿಗೆ ಸಹಿ ಹಾಕುವ ಮೂಲಕ ಚಾಲನೆ ನೀಡಿದ್ದಾರೆ.

ಇದೀಗ ಈ ಆರು ಗ್ಯಾರಂಟಿಗಳಲ್ಲಿ ಒಂದಾದ ಮಹಾಲಕ್ಷ್ಮಿ ಯೋಜನೆಗೆ ಸಿಎಂ ರೇವಂತ್ ರೆಡ್ಡಿ ಚಾಲನೆ ನೀಡಿದ್ದಾರೆ.

ಸೆಪ್ಟೆಂಬರ್ 18 ರಂದು ಚುನಾವಣೆ ಸಮಯದಲ್ಲಿ ಕಾಂಗ್ರೆಸ್​​​ ತನ್ನ ಪ್ರಣಾಳಿಕೆಯಲ್ಲಿ ಮಹಾಲಕ್ಷ್ಮಿ ಯೋಜನೆಯನ್ನು ಘೋಷಿಸಿತು. ಯೋಜನೆಯ ಪ್ರಕಾರ, ಕಾಂಗ್ರೆಸ್ ಪಕ್ಷವು ತೆಲಂಗಾಣದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಒದಗಿಸುತ್ತದೆ ಮತ್ತು ಮಹಾಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು ₹ 2500 ನೀಡುತ್ತದೆ ಎಂದು ಹೇಳಿತ್ತು.

ಮಹಿಳೆಯರು, ಹುಡುಗಿಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ ಪ್ರಯಾಣವನ್ನು ಒದಗಿಸುವ ಮಹಾಲಕ್ಷ್ಮಿ ಯೋಜನೆಗೆ ಇಂದು ಅಧಿಕೃತ ಚಾಲನೆ ಸಿಕ್ಕಿದೆ. ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ, ಆರು ಭರವಸೆಗಳನ್ನು ರೇವಂತ್ ರೆಡ್ಡಿ ಗುರುವಾರ ಅಂಗೀಕರಿಸಿದ್ದಾರೆ.

ಈ ಯೋಜನೆಯ ಮೂಲಕ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಟಿಎಸ್‌ ಆರ್‌ ಟಿಸಿ) ತೆಲಂಗಾಣ ರಾಜ್ಯದ ಗಡಿಯೊಳಗೆ ಸರ್ಕಾರಿ ಪಲ್ಲೆ ವೆಲುಗು ಮತ್ತು ಎಕ್ಸ್‌ ಪ್ರೆಸ್ ಬಸ್‌ ಗಳಲ್ಲಿ ಯುವತಿಯರು, ಎಲ್ಲಾ ವಯೋಮಾನದ ಮಹಿಳೆಯರು ಮತ್ತು ಟ್ರಾನ್ಸ್‌ ಜೆಂಡರ್ ​​ಗಳಿಗೆ ಉಚಿತ ಪ್ರಯಾಣವನ್ನು ಒದಗಿಸುವ ಗುರಿಯನ್ನು ಹೊಂದಿದೆ.

ಮಹಾಲಕ್ಷ್ಮಿ ಯೋಜನೆ ಇಂದಿನಿಂದ ಜಾರಿಗೆ ಬರಲಿದೆ. ತೆಲಂಗಾಲದ ಮಹಿಳೆಯರಿಗೆ ಈ ಯೋಜನೆ ಹೆಚ್ಚು ಉಪಯೋಗವನ್ನು ನೀಡಲಿದೆ ಎಂದು ಹೇಳಿದ್ದಾರೆ. ತೆಲಂಗಾಣ ರಾಜ್ಯದ ಗಡಿಯವರೆಗೆ ಫಲಾನುಭವಿಗಳಿಗೆ ಅಂತರ-ರಾಜ್ಯ ಎಕ್ಸ್‌ ಪ್ರೆಸ್ ಮತ್ತು ಪಲ್ಲೆ ವೆಲುಗು ಬಸ್‌ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು.

ಸಾಫ್ಟ್‌ವೇರ್ ಆಧಾರಿತ “ಮಹಾ ಲಕ್ಷ್ಮಿ” ಸ್ಮಾರ್ಟ್ ಕಾರ್ಡ್ ನೀಡುವ ಕೆಲಸವನ್ನು ಮಾಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.