ಮನೆ ಅಪರಾಧ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪಘಾತ: ಸೀಟ್ ಬೆಲ್ಟ್ ಧರಿಸಿದ್ದಕ್ಕೆ ಪಾರಾದ ಚಾಲಕ

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪಘಾತ: ಸೀಟ್ ಬೆಲ್ಟ್ ಧರಿಸಿದ್ದಕ್ಕೆ ಪಾರಾದ ಚಾಲಕ

0

ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕಾರು ಡಿವೈಡರ್ ​ಗೆ ಗುದ್ದಿ ಗಾಳಿಯಲ್ಲಿ ಮೂರು ಬಾರಿ ಪಲ್ಟಿ ಹೊಡೆದರೂ ಕೂಡ ಕಾರು ಚಾಲಕ ಸೀಟ್​ ಬೆಲ್ಟ್​ ಧರಿಸಿದ್ದರಿಂದ ಪ್ರಾಣ ಉಳಿದಿದೆ.

ಕಾರಿನ ಏರ್ ಬ್ಯಾಗ್ ಎಲ್ಲವೂ ಓಪನ್ ಆಗಿದ್ದು, ಇದರಿಂದ ಚಿಕ್ಕ ಗಾಯವಿಲ್ಲದೆ ಯವಕ ಬಚಾವ್​ ಆಗಿದ್ದಾನೆ.

ಬೆಂಗಳೂರಿನಿಂದ ಮೈಸೂರಿಗೆ ಓರ್ವ ಯುವಕ ಕಾರಿನಲ್ಲಿ ಹೊರಟಿದ್ದನು. ದಾರಿ ಮಧ್ಯೆ ಕಾರಿನ ಟೈರ್ ಬ್ಲಾಸ್ಟ್ ಆಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ನಿಯ ಡಿವೈಡರ್​ ಗೆ ಗುದ್ದಿದೆ. ಹೆದ್ದಾರಿ ಡಿವೈಡರ್ ಕೂಡ ಪೀಸ್ ಪೀಸ್ ಆಗಿದ್ದು, ಸೂಚನಾ ಫಲಕ ಸರ್ವೀಸ್ ರಸ್ತೆಗೆ ಬಿದ್ದಿದೆ.

ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.